Connect with us

    KARNATAKA

    ಚಿಕ್ಕಮಗಳೂರು – ಶಾಲಾ ಮಕ್ಕಳ ಮೇಲೆ ಹರಿದ ಬಸ್ – ಬಾಲಕಿ ಸಾವು….!!

    ಚಿಕ್ಕಮಗಳೂರು ಸೆಪ್ಟೆಂಬರ್ 07: ಬಸ್ ನಿಲ್ದಾಣದ ಬಳಿ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ  ಓರ್ವ ಬಾಲಕಿ ಸಾವನಪ್ಪಿದ್ದು ಮತ್ತೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಸೀತಾಪುರ ಕಾವಲ್ ದುಗ್ಲಾಪುರ ಗೇಟ್​ನಲ್ಲಿ ನಡೆದಿದೆ.


    ಅಪಘಾತದಲ್ಲಿ ತುಳಸಿ (15) ಮೃತ ವಿದ್ಯಾರ್ಥಿನಿ. ನಿವೇದಿತ (14) ಎಂಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಐದು ಮಕ್ಕಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


    ಅತಿ ವೇಗವಾಗಿ ಬಸ್​ ಚಲಾಯಿಸಿಕೊಂಡು ಬಂದ ಚಾಲಕನ ವಿರುದ್ಧ ಸ್ಥಳೀಯರ ಆಕ್ರೋಶ ಹೊರ ಹಾಕುತ್ತಿದ್ದಾರೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply