Connect with us

    KARNATAKA

    ಚಿಕ್ಕಮಗಳೂರು: ಶಾಖಾದ್ರಿ ಮನೆ ಮೇಲೆ ದಾಳಿ, ಚಿರತೆ, ಜಿಂಕೆ ಚರ್ಮ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು

    ಚಿಕ್ಕಮಗಳೂರು: ರಾಜ್ಯಾದ್ಯಾಂತ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಚಿಕ್ಕಮಗಳೂರಿನಲ್ಲಿ ಶಾಖಾದ್ರಿ ಮನೆ ಮೇಲೆ ದಾಳಿ ನಡೆಸಿದ ಚಿಕ್ಕಮಗಳೂರು ಅರಣ್ಯಾಧಿಕಾರಿ ಅವರ ನೇತೃತ್ವದ ತಂಡದಿಂದ ತಲಾ ಒಂದು ಚಿರತೆ ಹಾಗೂ ಜಿಂಕೆ ಚರ್ಮ ವಶಕ್ಕೆ ಪಡೆದಿದ್ದಾರೆ.

    ಇಲ್ಲಿನ ಬಾಬಾ ಬುಡನ್​​ಗಿರಿ ದರ್ಗಾ ಶಾಖಾದ್ರಿ ಅವರ ಮನೆ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿ ತಲಾ ಒಂದು ಚಿರತೆ ಹಾಗೂ ಜಿಂಕೆ ಚರ್ಮ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ ಎಂದು ಎಸಿಎಫ್​ ಮೋಹನ್​ ಮಾಹಿತಿ ನೀಡಿದ್ದಾರೆ.ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿನ ಶಾಖಾದ್ರಿ ಗೌಸ್​ ಮೋಯಿದ್ದೀನ್​ ಅವರ ಮನೆಯಲ್ಲಿ ಅಧಿಕಾರಿಗಳು ಶುಕ್ರವಾರ ಪರಿಶೀಲನೆ ಕೈಗೊಂಡಿದ್ದರು.

    ಆದರೆ, ಈ ವೇಳೆ ಶಾಖಾದ್ರಿ ಮನೆಯಲ್ಲಿ ಇರಲಿಲ್ಲ. ಮನೆಯ ಬಾಗಿಲು ಲಾಕ್​ ಆಗಿದ್ದ ಕಾರಣ 10 ಗಂಟೆಗೂ ಅಧಿಕ ಕಾಲ ಕಾದು ಕುಳಿತ ಅಧಿಕಾರಿಗಳು ಸಂಬಂಧಿಕರೊಬ್ಬರ ಮೂಲಕ ಮನೆಯ ಕೀ ತರಿಸಿಕೊಂಡಿದ್ದರು. ಬೆಂಗಳೂರಿನಿಂದ ಬಂದ ಬಸ್​ನಲ್ಲಿ ಕೀ ತರಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


    ಮನೆಯ ಕೀ ಬಂದ ಬಳಿಕ ಶಾಖಾದ್ರಿ ಅನುಪಸ್ಥಿತಿಯಲ್ಲಿ, ಅವರ ಸಂಬಂಧಿಕರ ಸಮ್ಮುಖದಲ್ಲಿ ಮನೆ ತಪಾಸಣೆ ನಡೆಸಲಾಗಿದೆ. ಈ ವೇಳೆ ಮನೆಯಲ್ಲಿ ಒಂದು ಚಿರತೆ ಹಾಗೂ ಒಂದು ಜಿಂಕೆ ಚರ್ಮ ಪತ್ತೆಯಾಗಿದೆ. ಎರಡು ಪ್ರಾಣಿಯ ಚರ್ಮವನ್ನು ವಶಕ್ಕೆ ಪಡೆದಿದ್ದು, ಎಫ್.ಎಸ್.ಎಲ್. ವರದಿಗೆ ಚರ್ಮವನ್ನು ಕಳುಹಿಸಲಾಗುವುದು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ನೊಟೀಸ್ ಜಾರಿ ಮಾಡುತ್ತೇವೆ. ಬಳಿಕ ಮುಂದಿನ ತನಿಖೆ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply