Connect with us

KARNATAKA

ಚಿಕ್ಕಮಗಳೂರು – ಮೆಸ್ಕಾಂ ಲಾರಿಗೆ ಕಾರುಗಳ ಸರಣಿ ಡಿಕ್ಕಿ – ನಾಲ್ವರ ಸಾವು

ಚಿಕ್ಕಮಗಳೂರು ಮೇ 24 : ಮೆಸ್ಕಾಂ ಲಾರಿಗೆ ಓಮ್ನಿ ಹಾಗೂ ಆಲ್ಟೋ ಕಾರುಗಳು ಡಿಕ್ಕಿ ಹೊಡೆದ ಪರಿಣಾಮ ಓಮ್ನಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನಪ್ಪಿದ ಘಟನೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ಮತ್ತು ಕೊಟ್ಟಿಗೆಹಾರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.


ಮೃತರೆಲ್ಲರು ಚಿತ್ರದುರ್ಗ ಮತ್ತು ದಾವಣಗೆರೆ ಮೂಲದವರು ಎಂದು ಹೇಳಲಾಗುತ್ತಿದ್ದು, ಒಂದೇ ಕುಟುಂಬದ ಸದಸ್ಯರು ಧರ್ಮಸ್ಥಳ ಯಾತ್ರೆ ಮುಗಿಸಿ ವಾಪಾಸಾಗುತ್ತಿದ್ದರು ಎನ್ನಲಾಗಿದೆ. ವಾಹನವೊಂದನ್ನು ಓವರ್‌ ಟೇಕ್ ಮಾಡಿ ಸಾಗುವಾಗ ಎದುರಿನಿಂದ ಬರುತ್ತಿದ್ದ ಮೆಸ್ಕಾಂ ಲಾರಿಗೆ ಓಮ್ನಿ ಕಾರು ಢಿಕ್ಕಿ ಹೊಡೆದಿದ್ದು, ಹಿಂದಿನಿಂದ ಬರುತ್ತಿದ್ದ ಅದೇ ಕುಟುಂಬದ ಆಲ್ಟೋ ಕಾರು ಕೂಡ ಓಮ್ನಿಯ ಹಿಂಬದಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಓಮ್ನಿ ಕಾರು ನಜ್ಜುಗುಜ್ಜಾಗಿದ್ದು, ಓಮ್ನಿಯಲ್ಲಿದ್ದ ಮೂವರು ಪುರುಷರು ಮತ್ತು ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಇತರೆ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *