Connect with us

KARNATAKA

ಚಿಕ್ಕಮಗಳೂರು – ಟ್ರ್ಯಾಕ್ಟರ್ ಗೆ ವಿದ್ಯುತ್ ತಂತಿ ತಗುಲಿ ಮೂವರ ಸಾವು

ಚಿಕ್ಕಮಗಳೂರು ಸೆಪ್ಟೆಂಬರ್ 07: ಗಣಪತಿ ಮೂರ್ತಿಯನ್ನು ನೀರಿನಲ್ಲಿ ವಿಸರ್ಜಿಸಿ ಟ್ರಾಕ್ಟರ್ ನಲ್ಲಿ ಹಿಂತಿರುಗುವಾಗ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಮೂವರು ಸಾವನಪ್ಪಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಿ.ಹೊಸಹಳ್ಳಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.


ಮೃತರನ್ನು ರಾಜು (47), ರಚನಾ (35), ಪಾರ್ವತಿ(26) ಎಂದು ಗುರುತಿಸಲಾಗಿದೆ. ಅಸ್ವಸ್ಥರಾಗಿರುವ ಪಲ್ಲವಿ, ಸಂಗೀತಾ, ಗೌರಮ್ಮ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಣಕಲ್ ಠಾಣೆ ಪೊಲೀಸರು ತಿಳಿಸಿದ್ದಾರೆ. ಮಂಟಪಕ್ಕೆ ವಿದ್ಯುತ್ ತಂತಿ ತಾಗಿ, ವಿದ್ಯುತ್ ಪ್ರವಹಿಸಿ ಅವಘಡ ಸಂಭವಿಸಿದೆ. ತಕ್ಷಣವೇ ಅಸ್ವಸ್ಥರನ್ನು ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ಒಯ್ಯಲಾಯಿತು. ಚಿಕಿತ್ಸೆಗೆ ಸ್ಪಂದಿಸದೆ ಮೂವರು ಮೃತಪಟ್ಟಿದ್ದಾರೆ. ಪಲ್ಲವಿ, ಸಂಗೀತಾ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಹಾಸನಕ್ಕೆ ಒಯ್ಯಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *