Connect with us

LATEST NEWS

ಕುಂದಾಪುರ 17 ವರ್ಷದ ಬಾಲಕಿಯ ಬಾಲ್ಯವಿವಾಹ ತಡೆದ ಅಧಿಕಾರಿಗಳು

ಉಡುಪಿ ಡಿಸೆಂಬರ್ 31: 17 ವರ್ಷದ ಬಾಲಕಿಗೆ 28 ವರ್ಷದ ಯುವಕನೊಂದಿಗೆ ನಡೆಯುತ್ತಿದ್ದ ಮದುವೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಡೆದಿದ್ದಾರೆ.


ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು ಗುಡ್ಡೆಯಂಗಡಿಯ ತ್ರಾಸಿ ಮಹಾಗಣಪತಿ ಸಭಾಭವನದಲ್ಲಿ ತಲ್ಲೂರು ಗುಡ್ಡೆಯಂಗಡಿಯ 17 ವರ್ಷದ ಬಾಲಕಿಗೆ 28 ವರ್ಷದ ಹುಡುಗನೊಂದಿಗೆ ಮದುವೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದರು.


ಈ ಮದುವೆಗೆ 200 ಕ್ಕೂ ಹೆಚ್ಚು ಮಂದಿ ಸೇರಿದ್ದು, ಈ ಕುರಿತಂತೆ ಮಾಹಿತಿ ಬಂದ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ .ಪೊಲೀಸ್ ಇಲಾಖೆ ಗಂಗೊಳ್ಳಿ .ಗ್ರಾಮ ಪಂಚಾಯತ್ ತ್ರಾಸಿ ಇಲ್ಲಿನ ಅಧಿಕಾರಿಗಳ ತಂಡ ಮದುವೆ ಹಾಲ್ ಗೆ ಹಠಾತ್ ಭೇಟಿ ನೀಡಿ ಬಾಲ್ಯವಿವಾಹವನ್ನು ತಡೆದಿದ್ದಾರೆ. ಕುಟುಂಬಿಕರಿಂದ ಮತ್ತು ಹಾಲ್ ಮಾಲಿಕರು ಮತ್ತು ಪುರೋಹಿತರಿನಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಯಿತು .

Share Information
Continue Reading
Advertisement
Click to comment

Leave a Reply

Your email address will not be published. Required fields are marked *