Connect with us

    DAKSHINA KANNADA

    ಮದ್ಯದಂಗಡಿ ವಿರೋಧಿಸಿ ಪ್ರತಿಭಟನೆಯಲ್ಲಿ ಮಕ್ಕಳೂ ಭಾಗಿ

    ಪುತ್ತೂರು,ಸೆಪ್ಟಂಬರ್ 20: ಸರಕಾರಿ ಜಮೀನಿನಲ್ಲಿ  ನಿರ್ಮಿಸಿರುವ ಕಟ್ಟಡದಲ್ಲಿ ತಲೆ ಎತ್ತಿರುವ ಮದ್ಯದಂಗಡಿ ವಿರೋಧಿಸಿ ಕಡಬದ ಕಲ್ಲುಗುಡ್ಡೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದಿಗೆ 9 ನೇ ದಿನಕ್ಕೆ ಕಾಲಿರಿಸಿದೆ. ಮದ್ಯದಂಗಡಿಯನ್ನು ಕೂಡಲೇ ಬಂದ್ ಮಾಡಬೇಕೆಂದು ಒತ್ತಾಯಿಸಿ ಸ್ಥಳೀಯ ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳು ಮುಷ್ಕರ ನಡೆಸುತ್ತಿದ್ದರೂ, ಅಧಿಕಾರಿಗಳು ಈ ಬಗ್ಗೆ ಗಮನವನ್ನೇ ಹರಿಸಲಿಲ್ಲ ಎನ್ನುವ ಆರೋಪವನ್ನೂ ಗ್ರಾಮಸ್ಥರು ಮಾಡುತ್ತಿದ್ದಾರೆ. ಇಂದು ಬೃಹತ್ ಸಂಖ್ಯೆಯಲ್ಲಿ ಸೇರಿದ ಗ್ರಾಮಸ್ಥರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದೆ ಪ್ರತಿಭಟನೆಯನ್ನು ತೊಡಗಿಸಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply