ಚಿತ್ರದುರ್ಗ,ಫೆಬ್ರವರಿ 27 : ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಮುಗಿಸಿ ಬರುತ್ತಿದ್ದ ಕಾರೊಂದು ಚಾಲಕನ ಅಜಾಗರೂಕತೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿ, ಇಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹಿರೆಹಳ್ಳಿ ಬಳಿ ಫೆಬ್ರವರಿ 26 ರಂದು ನಡೆದಿದೆ.

ಮೃತರನ್ನು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹೊಸಕೆರೆ ಗ್ರಾಮದ ನರಸಿಂಹ ಮೂರ್ತಿ (38), ಗಂಗಾಧರ್ (35) ಲೋಹಿತ್ (40) ಎಂದು ಗುರುತಿಸಲಾಗಿದೆ. ಮಂತ್ರಾಲಯದಿಂದ ಕುಣಿಗಲ್ ಗೆ ಹಿಂದಿರುಗುವ ವೇಳೆ ಕಾರಿನ ಚಾಲಕನ ಅಜಾಗರೂಕತೆಯಿಂದ ಹಾಗೂ ಅತಿವೇಗದಿಂದ ಈ ಅಪಘಾತ ಸಂಭವಿಸಿದೆ.
ಇನ್ನು ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನ ಚಾಲಕನ ಬದಿಯಲ್ಲಿ ಕುಳಿತಿದ್ದವರ ತಲೆ ಕಟ್ ಆಗಿದ್ದು, ಉಳಿದ ಇಬ್ಬರು ಗಂಭಿರವಾಗಿ ಗಾಯಗೊಂಡು ಚಳ್ಳಕೆರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .