LATEST NEWS
ಹಳೆ ಬಂದರು ಕಾರ್ಮಿಕರ ಹೋರಾಟ ಕಡೆಗಣಿಸಬೇಡಿ – ಸುನಿಲ್ ಕುಮಾರ್ ಬಜಾಲ್
ಹಳೆ ಬಂದರು ಕಾರ್ಮಿಕರ ಹೋರಾಟ ಕಡೆಗಣಿಸಬೇಡಿ – ಸುನಿಲ್ ಕುಮಾರ್ ಬಜಾಲ್
ಮಂಗಳೂರು ಅಕ್ಟೋಬರ್ 15: ಕಾರ್ಮಿಕರ ನ್ಯಾಯಯುತವಾದ ಬೇಡಿಕೆ ಈಡಿರೇಕೆಗಾಗಿ ಹಮಾಲಿ ಕಾರ್ಮಿಕರ ಹೋರಾಟವನ್ನು ನಿರ್ಲಕ್ಷಿಸುವ ಮನೋಭಾವನೆಯಿಂದ ಹೊರ ಬಂದು ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು. ಕಾರ್ಮಿಕರು ಮುಷ್ಕರಕ್ಕೆ ಮುಂದಾಗುವ ಮೊದಲು ಕಾರ್ಮಿಕರ ಬೇಡಿಕೆ ಇತ್ಯರ್ಥ ಮಾಡಿ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಎಚ್ಚರಿಕೆ ನೀಡಿದ್ದಾರೆ.
ಬಂದರು ಸಗಟು ಮಾರುಕಟ್ಟೆಯ ಹಮಾಲಿ ಕಾರ್ಮಿಕರ ಕೂಲಿ ಪರಿಷ್ಕರಣೆ ಮಾಡದೆ ವಿಳಂಬ ಮಾಡುತ್ತಿರುವ ವರ್ತಕರ ಧೋರಣೆ ಖಂಡಿಸಿ ಹಾಗೂ ಕಾರ್ಮಿಕರ ಎಲ್ಲಾ ನ್ಯಾಯಯುತವಾದ ಬೇಡಿಕೆ ಈಡೇರಿಸಲು ಆಗ್ರಹಿಸಿ ಇಂದು ಹಳೆ ಬಂದರು ಕಾರ್ಮಿಕರ ಕಟ್ಟೆ ಬಳಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಒಂದು ದಿನದ ನಿರಾಹಾರ ಧರಣಿ ಸತ್ಯಾಗ್ರಹ ಉದ್ಘಾಟಿಸಿ ಮಾತನಾಡುತ್ತಿದ್ದರು.
ಜಿಲ್ಲೆಯ ಆರ್ಥಿಕತೆಯ ಜೀವನಾಡಿ ಇರುವುದೇ ಹಳೆಬಂದರಿನಲ್ಲಿ ಇಲ್ಲಿಯ ಕಾರ್ಮಿಕರಿಗೆ ಅನ್ಯಾಯ ಸಹಿಸಲು ಸಾಧ್ಯವಿಲ್ಲ. ಬಂದರು ಹಮಾಲಿ ಕಾರ್ಮಿಕರು ಏಕಾಂಗಿಯಲ್ಲ ಜಿಲ್ಲೆಯ ಕಾರ್ಮಿಕ ವರ್ಗದ ಬೆಂಬಲ ನಿಮಗೆ ಸಿಗಲಿದೆ ಎಂದು ಹೋರಾಟಕ್ಕೆ ಸಹಕಾರದ ಭರವಸೆ ನೀಡಿದರು.
You must be logged in to post a comment Login