LATEST NEWS
ಶೇಕಡ 20ರಷ್ಟು ಟಿಕೆಟ್ ದರ ಏರಿಕೆಯೊಂದಿಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆ ಖಾಸಗಿ ಬಸ್ ಸಂಚಾರ ಆರಂಭ
ಮಂಗಳೂರು ಜೂನ್ 30: ಕೊರೊನಾ ಲಾಕ್ ಡೌನ್ ಹಿನ್ನಲೆ ಸ್ಥಗಿತಗೊಂಡಿದ್ದ ಖಾಸಗಿ ಬಸ್ ಸಂಚಾರ ನಾಳೆ ಆರಂಭವಾಗಲಿದ್ದು, ಶೇಕಡ 20 ರಷ್ಟು ಟಿಕೇಟ್ ದರ ಏರಿಕೆಯೊಂದಿಗೆ ಬಸ್ ಸಂಚಾರ ಆರಂಭಿಸಲಿದೆ.
ಕೊರೊನಾ ಎರಡನೇ ಅಲೆ ಹಿನ್ನಲೆ ಲಾಕ್ ಡೌನ್ ನಿಂದ ಸ್ಥಗಿತಗೊಂಡಿದ್ದ ಖಾಸಗಿ ಬಸ್ ಸಂಚಾರ ಮತ್ತೆ ಪ್ರಾರಂಭಗೊಳ್ಳಲಿದೆ. ಅನ್ಲಾಕ್ ನಲ್ಲಿ ಶೇಕಡ 50 ಬಸ್ ಸಂಚಾರಕ್ಕೆ ಅನುಮತಿ ನೀಡಿದ್ದರೂ ಕೂಡ ತಾಂತ್ರಿಕ ಕಾರಣಗಳಿಂದಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಸ್ ಸಂಚಾರ ಆರಂಭಗೊಂಡರಲಿಲ್ಲ. ಈ ನಡುವೆ ದ.ಕ ಜಿಲ್ಲಾ ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ರಾಜ್ ಆಳ್ವ ಹಾಗೂ ಕೆನರಾ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಅವರ ನೇತೃತ್ವದಲ್ಲಿ ಸಭೆ ನಡೆಸಿದ್ದು, ಜುಲೈ 1ರಿಂದ ಖಾಸಗಿ ಬಸ್ ಸಂಚಾರಕ್ಕೆ ತೀರ್ಮಾನಿಸಲಾಗಿದೆ.
ಕೊರೊನಾ ಮಾರ್ಗಸೂಚಿ ಪಾಲಿಸಿ ಬಸ್ ಸಂಚಾರ ಆರಂಭವಾಗಲಿದೆ. ಬಸ್ ಟಿಕೆಟ್ ದರ ಶೇ.20ರಷ್ಟು ಏರಿಕೆ ಮಾಡಲಾಗಿದ್ದು, ಈ ದರ ಕೊರೊನಾ ಮಾರ್ಗಸೂಚಿ ಇರುವ ತನಕ ದರ ಏರಿಕೆ ಇರಲಿದೆ ಎಂದು ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ರಾಜ್ ಆಳ್ವ ಮಾಹಿತಿ ನೀಡಿದ್ದಾರೆ.
You must be logged in to post a comment Login