Connect with us

DAKSHINA KANNADA

ಹಿಂದೂ ಮುಖಂಡನ ಮೇಲೆ ಹಲ್ಲೆ ಖಂಡಿಸಿ ಸುಬ್ರಹ್ಮಣ್ಯದಲ್ಲಿ ಇಂದು ಸ್ವಯಂಪ್ರೇರಿತ ಬಂದ್

ಹಿಂದೂ ಮುಖಂಡನ ಮೇಲೆ ಹಲ್ಲೆ ಖಂಡಿಸಿ ಸುಬ್ರಹ್ಮಣ್ಯದಲ್ಲಿ ಇಂದು ಸ್ವಯಂಪ್ರೇರಿತ ಬಂದ್

ಪುತ್ತೂರು ಅಕ್ಟೋಬರ್ 25: ಸುಬ್ರಹ್ಮಣ್ಯ ದಲ್ಲಿ ನಿನ್ನೆ ನಡೆದ ಹಿಂದೂ ಜಾಗರಣ ವೇದಿಕೆ ಮುಖಂಡ ನ ಮೇಲಿನ ಹಲ್ಲೆಯನ್ನು ಖಂಡಿಸಿ ಸುಬ್ರಹ್ಮಣ್ಯ ನಾಗರಿಕರು ಇಂದು ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಿದ್ದಾರೆ.

ಚೈತ್ರಾ ಕುಂದಾಪುರ ಹಾಗೂ ಆಕೆಯ ತಂಡ ನಿನ್ನೆ ರಾತ್ರಿ ಹಿಂದೂ ಮುಖಂಡ ಗುರುಪ್ರಸಾದ್ ಪಂಜ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪದಡಿ ಸುಬ್ರಹ್ಮಣ್ಯ ಸಾರ್ವಜನಿಕರು ಈ ಬಂದ್ ಗೆ ಕರೆ ನೀಡಿದ್ದಾರೆ.

ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ರಥ ಬೀದಿಯಲ್ಲಿ ಹಿಂದೂ ಮುಖಂಡ ನ ವಿರುದ್ಧ ಹಲ್ಲೆ ಖಂಡಿಸಿ ಸುಬ್ರಹ್ಮಣ್ಯ ನಾಗರಿಕರಿಂದ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದ್ದಾರೆ. ಪ್ರತಿಭಟನಾ ಮೆರವಣೆಗೆಯಲ್ಲಿ ಚೈತ್ರಾ ಕುಂದಾಪುರ ವಿರುದ್ದ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುಪ್ರಸಾದ್ ಪಂಜ ಹಾಗೂ ಚೈತ್ರಾ ಕುಂದಾಪುರ ತಂಡದ ವಿರುದ್ಧ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಪ್ರಕರಣ ಕೂಡಾ ದಾಖಲಾಗಿದೆ. ಇಬ್ಬರೂ ಕೂಡಾ ಇದೀಗ ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚೈತ್ರಾ ಕುಂದಾಪುರ ಜೊತೆಗೆ ಬಂದ 6 ಮಂದಿಯನ್ನು ಸುಬ್ರಹ್ಮಣ್ಯ ಪೋಲೀಸರು ಬಂಧಿಸಿದ್ದಾರೆ. ಅಲ್ಲದೆ ಚೈತ್ರಾ ಕುಂದಾಪುರ ಉಪಯೋಗಿಸಿದ ಇನ್ನೋವಾ ಕಾರನ್ನೂ ಪೋಲೀಸರು ವಶಕ್ಕೆ ಪಡೆದಿದ್ದಾರೆ.

VIDEO

Share Information
Continue Reading
Advertisement
Click to comment

Leave a Reply

Your email address will not be published. Required fields are marked *