Connect with us

    LATEST NEWS

    ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕರಾವಳಿ ಪ್ರವಾಸ ಆರಂಭ

    ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕರಾವಳಿ ಪ್ರವಾಸ ಆರಂಭ

    ಮಂಗಳೂರು ಸೆಪ್ಟೆಂಬರ್ 7: ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಇಂದು ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

    ವಿಮಾನ ನಿಲ್ದಾಣದಲ್ಲಿ ಪೊಲೀಸರಿಂದ ಗೌರವರಕ್ಷೆ ಸ್ವೀಕರಿಸಿ ನೇರವಾಗಿ ಅಲ್ಲಿಂದ ಕಾರಿನಲ್ಲಿ ಉಡುಪಿಗೆ ತೆರಳಿದರು. ಈ ನಡುವೆ ಮಾಧ್ಯಮದವರ ಜೊತೆ ಮಾತನಾಡಲು ನಿರಾಕರಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಎಲ್ಲವನ್ನೂ ಸಂಜೆ ಮಾತನಾಡುತ್ತೇನೆ ಎಂದು ಹೇಳಿದರು. ಇಂದು ಉಡುಪಿಯಲ್ಲಿ ಅಭಿವೃದ್ಧಿ ಪರಿಶೀಲನೆ ನಡೆಸಲಿರುವ ಸಿಎಂ ಕುಮಾರಸ್ವಾಮಿ ಮಧ್ಯಾಹ್ನದ ಬಳಿಕ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಿ ಅಭಿವೃದ್ದಿ ಪರಿಶೀಲನೆ ನಡೆಸಲಿದ್ದಾರೆ.

    ಕರಾವಳಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ನಂತರ ಪರ್ಯಾಯ ಪರ್ಯಾಯ ಪಲಿಮಾರು ಸ್ವಾಮೀಜಿ ಭೇಟಿ ಮಾಡಿದ ಕುಮಾರಸ್ವಾಮಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ವಿದ್ಯಾಧೀಶ ಸ್ವಾಮೀಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಗೌರವ ಸಲ್ಲಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply