LATEST NEWS
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ – ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ – ಸಿಎಂ

ಮಂಗಳೂರು: ಬಿಜೆಪಿ ಕಾರ್ಯಕರ್ತ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಎಫ್ಐಆರ್ ಆಗಿದ್ದು, ಕಾನೂನಿನ ಪ್ರಕಾರ ತನಿಖೆ ನಡೆಯಲಿದೆ. ಎಲ್ಲಿಯೂ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಎಫ್.ಐ.ಆರ್ ಆಗಿದೆ. ವಿವರಗಳನ್ನು ಪಡೆಯಲಾಗಿದೆ. ಸಚಿವ ಕೆ.ಎಸ್. ಈಶ್ವರಪ್ಪ ಅವರೊಂದಿಗೆ ಈ ಬಗ್ಗೆ ದೂರವಾಣಿ ಮೂಲಕ ಹಾಗೂ ನೇರವಾಗಿ ಮಾತನಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ವಿರೋಧ ಪಕ್ಷದವರು ಈ ವಿಚಾರದಲ್ಲಿ ತಪ್ಪುಗಳನ್ನು ಕಂಡುಹಿಡಿಯಲು ಪ್ರಯತ್ನ ಮಾಡುತ್ತಿದ್ದಾರೆ. ತನಿಖೆಯಲ್ಲಿ ಹೊರಬೀಳಲಿದೆ. ಯಾರು ಏನು ಪಾತ್ರ ವಹಿಸಿದ್ದಾರೆ. ಇದರ ಹಿನ್ನೆಲೆ ಏನು ಎನ್ನುವ ಸತ್ಯಾಂಶ ತನಿಖೆಯಿಂದ ತಿಳಿಯಲಿದೆ. ವರಿಷ್ಠರಿಗೆ ವಿಷಯ ತಿಳಿದಿದೆ ಎಂದರು.
