Connect with us

    LATEST NEWS

    ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ -ಮುಖ್ಯಮಂತ್ರಿ ಸಿದ್ದರಾಮಯ್ಯ

    ಉಡುಪಿ, ಮಾರ್ಚ್ 13: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


    ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು. ಜಯಪ್ರಕಾಶ್ ಹೆಗಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದರು.

    ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ನೀಡದೇ ಯದುವೀರ್ ಅವರಿಗೆ ಟಿಕೆಟ್ ನೀಡುವ ನಿರ್ಧಾರವನ್ನು ಬಿಜೆಪಿ ಕೈಗೊಂಡಿರುವ ಕಾರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply