KARNATAKA
ನಿಮ್ಮ ಜಿಲ್ಲೆಯವರೇ ಸಚಿವರಾಗಿದ್ದರೂ ತುಳು ಭಾಷೆಗಾಗಿ ಕೆಲಸ ಮಾಡಿಲ್ಲ – ಸಿಎಂ ಸಿದ್ದರಾಮಯ್ಯ
ಬೆಂಗಳೂರು ನವೆಂಬರ್ 25: ತುಳು ಭಾಷೆಗೆ ರಾಜ್ಯದಲ್ಲಿ ಅಧಿಕೃತ ಭಾಷೆ ಸ್ಥಾನ ಮಾನ ನೀಡಲು ನಾನು ಪ್ರಯತ್ನಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಬೆಂಗಳೂರು ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮಂಗಳೂರು ಉಡುಪಿಯವರು ಸಿಕ್ರೆ ತುಳುವಿನಲ್ಲೆ ಮಾತನಾಡುತ್ತಾರೆ. ಅಷ್ಟರ ಮಟ್ಟಿಗೆ ಅವರ ಮಾತೃಭಾಷೆ ಬಗ್ಗೆ ಅಭಿಮಾನ ಇದೆ. ತುಳು ಭಾಷೆಗೆ ರಾಜ್ಯದಲ್ಲಿ ಅಧಿಕೃತ ಭಾಷೆ ಸ್ಥಾನಮಾನ ನೀಡುವಂತೆ ಒತ್ತಾಯ ಇದೆ. ಕಳೆದ ಭಾರಿ ಕರಾವಳಿಯ ಜಿಲ್ಲೆಯವರೇ ಕನ್ನಡ ಮತ್ತು ಸಂಸ್ಕೃತಿ ಸಚಿವರಿದ್ದರು ಆದರೂ ಕೂಡ ಯಾವುದೇ ರೀತಿಯ ಕೆಲಸ ಮಾಡಿಲ್ಲ. ಆದರೆ ಈಗ ನಾನು ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಮಾತನಾಡಿ ನಾವು ಮಾಡ್ಲಿಕ್ಕೆ ಪ್ರಯತ್ನ ಮಾಡುತ್ತೇನೆ ಎಂದರು.
You must be logged in to post a comment Login