KARNATAKA
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.
ತೀವ್ರ ಸುಸ್ತು, ಬಳಲಿಕೆಯಿಂದಾಗಿ ಹೆಚ್ಡಿಕೆ ಮಂಗಳವಾರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು.
ಅವರ ಆರೋಗ್ಯ ಸ್ಥಿರವಾಗಿದ್ದು ಯಾವುದೇ ತೊಂದರೆಗಳಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ನಿನ್ನೆ ಕುಮಾರ ಸ್ವಾಮೀ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಇಂದು ವಾರ್ಡ್ಗೆ ಶಿಫ್ಟ್ ಮಾಡಲಾಗಿದ್ದು ಗುಣಮುಖರಾಗುತ್ತಿದ್ದಾರೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಸಚಿವ ಚೆಲುವರಾಯ ಸ್ವಾಮೀ ಅವರೊಂದಿಗೆ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ಸ್ಥಿರವಾಗಿದೆ.
ಐಸಿಯುನಿಂದ ಜನರಲ್ ವಾರ್ಡ್ಗೆ ಶಿಫ್ಟ್ ಆಗಿದ್ದು, ನಾಳೆ ಅಥವಾ ನಾಡಿದ್ದು ಡಿಸ್ಚಾರ್ಜ್ ಆಗೋ ಸಾಧ್ಯತೆ ಇದೆ.
ಕೆಲ ದಿನಗಳು ವೈದ್ಯರು ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದು, ಯಾರು ಆತಂಕಕ್ಕೆ ಒಳಗಾಗೋದು ಬೇಡ ಅಂತ ಮಗ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
You must be logged in to post a comment Login