LATEST NEWS
ಮನೆಕಳೆದುಕೊಂಡವರಿಗೆ 5 ಲಕ್ಷ ಮನೆ ದುರಸ್ಥಿಗೆ 1 ಲಕ್ಷ ಸಿಎಂ ಯಡಿಯೂರಪ್ಪ ಘೋಷಣೆ
ಮನೆಕಳೆದುಕೊಂಡವರಿಗೆ 5 ಲಕ್ಷ ಮನೆ ದುರಸ್ಥಿಗೆ 1 ಲಕ್ಷ ಸಿಎಂ ಯಡಿಯೂರಪ್ಪ ಘೋಷಣೆ
ಮಂಗಳೂರು ಅಗಸ್ಟ್ 12: ಕರಾವಳಿಯ ಸುರಿದ ಮಹಾಮಳೆಗೆ ಭೂಕುಸಿತ ಹಾಗೂ ಪ್ರವಾಹದಿಂದ ಮನೆಕಳೆದುಕೊಂಡವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಸಾಂತ್ವಾನ ಹೇಳಿದರು. ಅಲ್ಲದೆ ಮನೆ ಕಳೆದುಕೊಂಡ ಕುಟುಂಬಸ್ಥರಿಗೆ ಮನೆ ನಿರ್ಮಿಸಲು 5 ಲಕ್ಷ ರೂಪಾಯಿ ಪರಿಹಾರ ಹಾಗೂ ಹಾನಿಯಾದ ಮನೆ ದುರಸ್ಥಿಗೆ 1ಲಕ್ಷ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು.
ಇಂದು ದಕ್ಷಿಣಕನ್ನಡ ಜಿಲ್ಲೆಗೆ ಪ್ರವಾಹ ಪೀಡಿತ ಪ್ರದೇಶಗಳ ಭೇಟಿಗಾಗಿ ಆಗಮಿಸಿದರು. ಬೆಳ್ತಂಗಡಿ ತಾಲ್ಲೂಕಿನ ಕುಕ್ಕಾವು ಗಂಜಿ ಕೇಂದ್ರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಸಂತ್ರಸ್ತರ ಅಹವಾಲು ಆಲಿಸಿದ ಬಳಿಕ ಮಾತನಾಡಿದರು, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 282 ಮನೆಗಳು ಸಂಪೂರ್ಣವಾಗಿ ನೆಲಸಮವಾಗಿವೆ. ಈ ಕುಟುಂಬಗಳಿಗೆ ತಲಾ 5 ಲಕ್ಷ ನೀಡಲಾಗುವುದು’ ಎಂದರು.
ಜಿಲ್ಲಾಧಿಕಾರಿಯವರು ಹದಿನೈದು ದಿನದೊಳಗೆ ನಿವೇಶನ ಗುರುತಿಸಿ, ಸಂತ್ರಸ್ತರಿಗೆ ಮಂಜೂರಾತಿ ಆದೇಶ ನೀಡುವರು. ಅಲ್ಲಿ ಮನೆ ನಿರ್ಮಿಸಿಕೊಳ್ಳಬಹುದು ಎಂದರು.ತುರ್ತು ಪರಿಹಾರವಾಗಿ ಪ್ರತಿ ಕುಟುಂಬಕ್ಕೆ ತಲಾ ರೂಪಾಯಿ 10,000 ನೆರವನ್ನು ಸೋಮವಾರ ಸಂಜೆಯೊಳಗೆ ವಿತರಿಸಲಾಗುವುದು. ಸಂತ್ರಸ್ತ ಕುಟುಂಬಗಳ ಮನೆ ದುರಸ್ತಿ ಮತ್ತು ಹೊಸ ಮನೆ ನಿರ್ಮಾಣ ಆಗುವವರೆಗೆ ಪ್ರತಿ ತಿಂಗಳು 5,000 ಬಾಡಿಗೆ ವೆಚ್ಚ ನೀಡಲಾಗುವುದು ಎಂದು ತಿಳಿಸಿದರು.
ರಸ್ತೆ ದುರಸ್ತಿ, ತಡೆಗೋಡೆ ನಿರ್ಮಾಣ ಶೀಘ್ರದಲ್ಲೇ ಆರಂಭವಾಗಲಿದೆ. ಬೆಳೆ ಹಾನಿ, ಜಮೀನು ಹಾನಿ ಕುರಿತು ಜಿಲ್ಲಾಧಿಕಾರಿ ವರದಿ ಸಲ್ಲಿಸಲಿದ್ದಾರೆ ಎಂದರು.
You must be logged in to post a comment Login