Connect with us

DAKSHINA KANNADA

ಕಾಲೇಜು ವಿದ್ಯಾರ್ಥಿಗಳ ನಡುವೆ ಘರ್ಷಣೆ, ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ…

ಪುತ್ತೂರು ನವೆಂಬರ್ 24: ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ ಆರೋಪದ ಮೇಲೆ ವಿದ್ಯಾರ್ಥಿಗೆ ಹಲ್ಲೆ ನಡೆಸಿದ ವಿದ್ಯಾರ್ಥಿಗಳ ತಂಡವನ್ನು ಸಸ್ಪೆಂಡ್ ಮಾಡಿದ ಕಾಲೇಜು ಪ್ರಾಂಶಪಾಲರ ಕ್ರಮವನ್ನು ಖಂಡಿಸಿ ವಿಧ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.


ನಿನ್ನೆ ವಿದ್ಯಾರ್ಥಿನಿಯೊಂದಿಗೆ ವಿದ್ಯಾರ್ಥಿ ಮಾತನಾಡಿದ ಆರೋಪದ ಹಿನ್ನಲೆಯಲ್ಲಿ ವಿದ್ಯಾರ್ಥಿಗೆ ವಿದ್ಯಾರ್ಥಿಗಳ ತಂಡವೊಂದು ಹಲ್ಲೆ ನಡೆಸಿದ ಪ್ರಕರಣ ನಡೆದಿತ್ತು. ಇದರಲ್ಲಿ ಹಲ್ಲೆಗೊಳಗಾದ ವಿಧ್ಯಾರ್ಥಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಈ ನಡುವೆ ಇದೇ ಘಟನೆಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ತರಗತಿಯಿಂದ ಸಸ್ಪೆಂಡ್ ಮಾಡಿದ್ದಾರೆಂದು ಆರೋಪಿಸಿ ಇಂದು ಕಾಲೇಜು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದು, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆಗೆ ಸಾಥ್ ನೀಡಿದೆ.

ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಎಬಿವಿಪಿ ವಿಭಾಗ ಸಂಚಾಲಕ ಸಂದೇಶ್ ಕಾಲೇಜು ಕ್ಯಾಂಪಸ್ ನಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿ ವಿದ್ಯಾರ್ಥಿನಿಗಳಿಗೆ ಕಿರುಕುಳ ನೀಡುವ ಘಟನೆ ನಿರಂತರ ನಡೆಯುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜಿನಲ್ಲಿ ಅಹಿತಕರ ಘಟನೆ ನಡೆಯುತ್ತಿದ್ದು, ಈ ನಡುವೆ ಹೊರಗಿನ ವ್ಯಕ್ತಿಗಳು ಕಾಲೇಜು ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದು, ಈ ವ್ಯಕ್ತಿಗಳ ವಿರುದ್ಧ ಪ್ರಾಂಶುಪಾಲರು ಕ್ರಮ ಕೈಗೊಳ್ಳುವ ಬದಲು ಕಾಲೇಜು ವಿದ್ಯಾರ್ಥಿಗಳ ಮೇಲೆಯೇ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ಧೇಶಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲರು ಯಾವುದೇ ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಹಿಂಪಡೆದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *