DAKSHINA KANNADA
ವಿಟ್ಲ – ನೇಣಿಗೆ ಶರಣಾದ ಕಾಲೇಜು ವಿಧ್ಯಾರ್ಥಿನಿ
ವಿಟ್ಲ ಅಕ್ಟೋಬರ್ 30: ಪದವಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಲದಲ್ಲಿ ನಡೆದಿದೆ. ಮೃತ ಯುವತಿಯನ್ನು ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕ ಹಾಗೂ ಕುಮುದಾಕ್ಷಿ ದಂಪತಿ ಪುತ್ರಿ ಶ್ರಾವ್ಯ (20) ಎಂದು ಗುರುತಿಸಲಾಗಿದೆ.
ವಿಟ್ಲದ ಪದವಿ ಕಾಲೇಜಿನ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ, ಅ. 29ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಧ್ಯಾಹ್ನದ ವೇಳೆ ತಂದೆ-ತಾಯಿ ತೋಟದ ಕೆಲಸ ಮುಗಿಸಿ ವಾಪಸ್ಸು ಬಂದಾಗ ಘಟನೆ ಬೆಳಕಿಗೆ ಬಂದಿದೆ.
You must be logged in to post a comment Login