DAKSHINA KANNADA
ಕೊರಳಪಟ್ಟಿ ಹಿಡುತ್ತೇನೆ ಎಂದ ಜಗದೀಶ್ ಕಾರಂತ್ ವಿರುದ್ದ ಡಿಸಿ ದೂರು – ಪ್ರಕರಣ ದಾಖಲು
ಪುತ್ತೂರು ನವೆಂಬರ್ 24 : ಪ್ರತಿಭಟನಾ ಸಭೆಯಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯುತ್ತೇನೆ ಎಂದು ಅಬ್ಬರಿಸಿದ ಹಿಂದೂ ಜಾಗರಣ ವೇದಿಕೆ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ವಿರುದ್ದ ಪ್ರಕರಣ ದಾಖಲಾಗಿದೆ.
ಕಾರಿಂಜೇಶ್ವರ ಕ್ಷೇತ್ರದ ಸುತ್ತಮುತ್ತ ನಡೆಯುವ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿ ಕಾರಿಂಜದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಜಗದೀಶ್ ಕಾರಂತ್ ಅಕ್ರಮ ಗಣಿಗಾರಿಕೆ ನಿಲ್ಲಿಸದೇ ಹೋದಲ್ಲಿ ಜಿಲ್ಲಾಧಿಕಾರಿ ಕಛೇರಿಗೆ ನುಗ್ಗಿ ಕೊರಳು ಪಟ್ಟಿ ಹಿಡಿಯುವ ಎಚ್ಚರಿಕೆ ನೀಡಿದ್ದರು. ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರರಿಂದ ಅವರು ಪೂಂಜಾಲುಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪದ ಮೇಲೆ ಜಗದೀಶ್ ಕಾರಂತ್ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
You must be logged in to post a comment Login