DAKSHINA KANNADA
ಜೈನ ಧರ್ಮದವರು ಆರಾಧಿಸುವ ಬಾಹುಬಲಿ ಭಗವಾನರ ಕುರಿತು ಆಶ್ಲೀಲ ಪದ ಬಳಕೆ ಆರೋಪ – ಜೈನ್ ಮಿಲನ್ನಿಂದ ಪುತ್ತೂರಿನಲ್ಲಿ ದೂರು
ಪುತ್ತೂರು: ಜೈನ ಧರ್ಮದದವರು ಆರಾಧಿಸುವ ಬಾಹುಬಲಿ ಭಗವಾನರ ಬಗ್ಗೆ ಅಶ್ಲೀಲವಾಗಿ ವಿವಾದಾತ್ಮಕ ಹೇಳಿಕೆ ನೀಡಿರುವ ಮೈಸೂರಿನ ನ್ಯೂ ಕಾಂಗ್ರೆಸ್ ಪಕ್ಷದ ರಾಷ್ಟ್ರಯ ಅಧ್ಯಕ್ಷ ಅಯೂಬ್ ಖಾನ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಭಾರತೀಯ ಜೈನ್ ಮಿಲನ್ ಪುತ್ತೂರು ಇದರ ನಿಯೋಗ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎಡಿಷನಲ್ ಎಸ್ಪಿ ಕುಮಾರಚಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಟಿವಿ ಚಾನಲ್ ನ ಪೇಜ್ನಲ್ಲಿ ಉಡುಪಿಯ ಹಿಜಾಬ್ ಗಲಾಟೆಯ ಸಂದರ್ಶನ ನೀಡುವ ಸಂದರ್ಭದಲ್ಲಿ ಜೈನ ಧರ್ಮದವರು ಆರಾಧಿಸುವ ಬಾಹುಬಲಿ ಭಗವಾನರ ಬಗ್ಗೆ ಅಯೂಬ್ ಖಾನ್ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಯೂಬ್ಖಾನ್ ಅವರು ಉದ್ದೇಶ ಪೂರ್ವಕವಾಗಿ ಜೈನ ಧರ್ಮದ ಧಾರ್ಮಿಕ ಭಾವನೆಗಳಿಗೆ ಮತ್ತು ನಂಬಿಕೆಗಳಿಗೆ ಧಕ್ಕೆಯನ್ನು ಉಂಟು ಮಾಡಿರುವುದಲ್ಲದೆ ಸಮಾಜದ ನಡುವೆ ಐಕ್ಯತೆ ಸಾಮರಸ್ಯ ಧಾರ್ಮಿಕ ಪರಂಪರೆಗಳ ನಡುವೆ ಸಾಮಾಜಿಕ ಅಸಮತೋಲನ ದ್ವೇಷ, ಭಾವನೆ, ಸಂಘರ್ಷ ಮತ್ತು ಶಾಂತಿ ಭಂಗವಾಗುವಂತಹ ಪರಿಸ್ಥಿತಿ ನಿರ್ಮಾಣ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಆರೋಪಿಯು ಜೈನ ಧರ್ಮದ ಧಾರ್ಮಿಕ ಭಾವನೆಗೆ ಧಕ್ಕೆ, ಉಂಟು ಮಾಡಿರುವ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 153(ಎ), (ಬಿ), 295(ಎ), 298, 506 ಮತ್ತು 76 ಐಟಿ ಕಾಯ್ದೆಯ ಅಡಿಯಲ್ಲಿ ಕಾನೂನು ಪ್ರಕಾರ ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಮನವಿಯಲ್ಲಿ ತಿಳಿಸಿದ್ದಾರೆ.
You must be logged in to post a comment Login