Connect with us

BELTHANGADI

ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿ ವಿರುದ್ದ ಬೆಳ್ತಂಗಡಿಯಲ್ಲಿ ದೂರು ದಾಖಲು

ಬೆಳ್ತಂಗಡಿ ಅಕ್ಟೋಬರ್ 21 : ಕಾರ್ಕಳದಲ್ಲಿ ನಡೆದ ಧರ್ಮಸಂರಕ್ಷಣಾ ಸಮಾವೇಶದಲ್ಲಿ ಮಾಜಿ ಶಾಸಕ ವಸಂತ ಬಂಗೇರ ಅವರನ್ನು ನಿಂದಿಸಿ ಜೀವ ಬೇದರಿಕೆ ಹಾಕಿರುವ ಬಗ್ಗೆ ಪವರ್ ಟಿ.ವಿ ವ್ಯವಸ್ಥಾಪಕ ನಿರ್ದೆಶಕ ರಾಕೇಶ್ ಶೆಟ್ಟಿ ವಿರುದ್ಧ ವಸಂತ ಬಂಗೇರ ಅವರ ಅಭಿಮಾನಿಗಳು ಬೆಳ್ತಂಗಡಿ ಪೊಲೀಸ್ ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ.


ಕಾರ್ಕಳದ ಕುಕ್ಕುಂದೂರಿನಲ್ಲಿ ನಡೆದ ಧರ್ಮ ಸಂರಕ್ಷಣಾ ಸಮಾವೇಶದಲ್ಲಿ ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿ ದಿಕ್ಸೂಚಿ ಭಾಷಣದಲ್ಲಿ ಮಾಜಿ ಶಾಸಕ ವಸಂತ ಬಂಗೇರ ಅವರನ್ನು ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಜೀವ ಬೆದರಿಕೆ ಒಡ್ಡಿದ್ದಾನೆ. ಅಲ್ಲದೆ ತನ್ನ ಮಾತುಗಳಿಂದ ಸಮಾಜದಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ಮಾಡಿದ್ದಾನೆ.ಬೆಳ್ತಂಗಡಿಯ ಹಾಗೂ ಉಜಿರೆಯ ಎಲ್ಲ ಜನರೂ ಪಾಪಿಗಳು, ನಾಚಿಕೆ ಇಲ್ಲದವರು ಎಂಬ ರೀತಿಯಲ್ಲಿ ಮಾತನಾಡಿದ್ದಾನೆ. ಇದರಿಂದಾಗಿ ತನಗೆ ಹಾಗೂ ಬಂಗೇರ ಅಭಿಮಾನಿಗಳಿಗೆ ತೀವ್ರ ಆಘಾತವಾಗಿದೆ. ಆದ್ದರಿಂದ ಈ ಬಗ್ಗೆ ಸಮರ್ಪಕವಾದ ತನಿಖೆ ನಡೆಸಿ ರಾಕೇಶ್ ಶೆಟ್ಟಿ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಪ್ರವೀಣ್ ಗೌಡ ಎಂಬವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *