Connect with us

    DAKSHINA KANNADA

    ಕೊಂಡಾಣ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಂ ಪತ್ತೆ..!

    ಉಳ್ಳಾಲ, ಎಪ್ರಿಲ್ 04: ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಂ ಪತ್ತೆಯಾಗಿದ್ದು, ಆಡಳಿತ ಸಮಿತಿ ಭಾನುವಾರ ಹುಂಡಿಯನ್ನು ಒಡೆಯುವ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದೆ.

    ಕರಾವಳಿ ಭಾಗದಲ್ಲಿ ದೇವಸ್ಥಾನ- ದೈವಸ್ಥಾನಗಳ ಹುಂಡಿ ಅಪವಿತ್ರ ನಡೆಸುವ ಕೃತ್ಯ ಮತ್ತೆ ಮುಂದುವರಿದಿದ್ದು. ಇದೀಗ ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆಯಾಗಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

    ದೈವಸ್ಥಾನದ ಆಡಳಿತ ಸಮಿತಿ ಭಾನುವಾರ ಹುಂಡಿಯನ್ನು ಒಡೆಯುವ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದೆ. ಕೆಲ ತಿಂಗಳ ಹಿಂದೆ ಉಳ್ಳಾಲ ಭಾಗದಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಇದೇ ರೀತಿಯ ಪ್ರಕರಣ ನಡೆದಿತ್ತು. ಅದೇ ಸಂದರ್ಭದಲ್ಲಿ ಕಾರಣಿಕ ಕ್ಷೇತ್ರ‌ ಕೊಂಡಾಣ ದೈವಸ್ಥಾನದಲ್ಲಿಯು ಆರೋಪಿಗಳು ದುಷ್ಕೃತ್ಯ ಎಸಗಿರುವ ಸಾಧ್ಯತೆಗಳಿವೆ. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply