Connect with us

    LATEST NEWS

    ಕಾಂಗ್ರೇಸ್ ಕಾರ್ಯಕರ್ತರಿಂದ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮೇಲೆ ಹಲ್ಲೆ

    ಕಾಂಗ್ರೇಸ್ ಕಾರ್ಯಕರ್ತರಿಂದ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮೇಲೆ ಹಲ್ಲೆ

    ಉಡುಪಿ ಸೆಪ್ಟೆಂಬರ್ 10: ತೈಲ ಬೆಲೆ ಏರಿಕೆ ಹಿನ್ನಲೆಯಲ್ಲಿ ಕಾಂಗ್ರೇಸ್ ಕರೆ ನೀಡಿರುವ ಭಾರತ್ ಬಂದ್ ವಿಚಾರದಲ್ಲಿ ಕಾಂಗ್ರೇಸ್ ಹಾಗೂ ಹಿಂದೂಪರ ಸಂಘಟನೆಯ ಕಾರ್ಯಕರ್ತರ ನಡುವೆ ಜಟಾಪಟಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕಡಿಯಾಳಿಯಲ್ಲಿ ವರದಿಯಾಗಿದೆ.

    ಈ ಸಂದರ್ಭದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಕುರಿತಂತೆ ಚೈತ್ರಾ ಕುಂದಾಪುರ ಅವರು ತಮ್ಮ ಸೋಶಿಯಲ್ ಮಿಡಿಯಾದಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ್ದು, ಈ ಕುರಿತಂತೆ ದೂರು ನೀಡಲು ಮುಂದಾಗಿದ್ದಾರೆ.

    ಭಾರತ್ ಬಂದ್ ಹಿನ್ನೆಲೆಯಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಒತ್ತಾಯದ ಬಂದ್ ಉಡುಪಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಒತ್ತಾಯವಾಗಿ ಬಂದ್ ಮಾಡುತ್ತಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಪ್ರಧಾನಿ ಮೋದಿಗೆ ಜೈಕಾರ ಕೂಗಿದರು. ಆಗ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದೆ.

    ಈ ನಡುವೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದ್ದು, ಕಾಂಗ್ರೇಸ್ ಕಾರ್ಯಕರ್ತರು ಹಾಗೂ ಚೈತ್ರಾ ಕುಂದಾಪುರ ಅವರ ನಡುವೆ ವಾಗ್ಯುದ್ಧ ಶುರುವಾಗಿತ್ತು. ಈ ಸಂದರ್ಭದಲ್ಲಿ ಪರಸ್ಪರ ತಳ್ಳಾಟ ಮಾಡಿಕೊಂಡ ಕಾರ್ಯಕರ್ತರನ್ನು ಬಿಡಿಸಲು ಪೊಲೀಸರು ಹರಸಾಹಸಪಟ್ಟರು.

    ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗಲಾಟೆ ಬಿಡಿಸುವಷ್ಟರಲ್ಲಿ ಹೈರಾಣಾಗಿ ಹೋದರು. ಎರಡು ಗುಂಪುಗಳ ಮನವೊಲಿಸುವಷ್ಟರಲ್ಲಿ ಖಾಕಿಧಾರಿಗಳು ಸುಸ್ತಾಗಿ ಹೋದರು.

    VIDEO

    Share Information
    Advertisement
    Click to comment

    You must be logged in to post a comment Login

    Leave a Reply