DAKSHINA KANNADA
ಬಿಜೆಪಿಯಿಂದ ಮನೆ ಮನೆಯಲ್ಲಿ ಅಣೆ ಪ್ರಮಾಣ – ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರೋಪ
ಸುಳ್ಯ ಎಪ್ರಿಲ್ 20 : ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂದು ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಆರೋಪಿಸಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ತಿಳಿದಿರುವುದರಿಂದ ವಿರೋಧಿಗಳು ಅಪಪ್ರಚಾರದಲ್ಲಿ ತೊಡಗಿದ್ದು ಕಾಂಗ್ರೇಸ್ ಕಾರ್ಯಕರ್ತರು ಇದಕ್ಕೆ ತಲೆಕೆಡಿಸಿಕೊಳ್ಳದೆ ಪ್ರೀತಿಯಿಂದ ಚುನಾವಣೆಯನ್ನು ಎದುರಿಸಲು ಸಿದ್ಧರಾಗಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಸಲಹೆ ನೀಡಿದರು.
ಸಂಪಾಜೆಯಿಂದ ಕಲ್ಲುಗುಂಡಿವರೆಗೆ ನಡೆದ ರೋಡ್ ಶೋ ಬಳಿಕ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಬಿಜೆಪಿಯವರು ಸಂಸದರಾಗಿದ್ದ 33 ವರ್ಷಗಳಲ್ಲಿ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಲಿಲ್ಲ. ಕಾಂಗ್ರೆಸ್ ಸಂಸದರಿದ್ದಾಗ ಆಗಿದ್ದ ಅಭಿವೃದ್ಧಿ ಕೆಲಸಗಳು ಜಿಲ್ಲೆಯನ್ನು ಮಾದರಿಯಾಗಿಸಿದ್ದವು. ಮುಂದೆಯೂ ಜಿಲ್ಲೆ ಮಾದರಿಯಾಗಲಿದೆ ಎಂದರು.
You must be logged in to post a comment Login