Connect with us

LATEST NEWS

ನಾಳೆ ಕರ್ನಾಟಕ ವಿಧಾನಸಭಾ ಚುನಾವಣೆಯ ಕಾಂಗ್ರೇಸ್ ಪ್ರಣಾಳಿಕೆ ಬಿಡುಗಡೆ

ನಾಳೆ ಕರ್ನಾಟಕ ವಿಧಾನಸಭಾ ಚುನಾವಣೆಯ ಕಾಂಗ್ರೇಸ್ ಪ್ರಣಾಳಿಕೆ ಬಿಡುಗಡೆ

ಮಂಗಳೂರು ಏಪ್ರಿಲ್ 26: ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೇಸ್ ನ ರಾಷ್ಟ್ರೀಯ ಅಧ್ಯಕ್ಷರೊಬ್ಬರು ಕರ್ನಾಟಕ ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಬಹಳ ಮುತುವರ್ಜಿ ವಹಿಸಿ ತಯಾರಿಸಿದ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ನಾಳೆ ಮಂಗಳೂರಿನಲ್ಲಿ ಬಿಡುಗಡೆಯಾಗಲಿದೆ. ಮಂಗಳೂರಿನ ಟಿ.ಎಂ ಪೈ ಹಾಲ್ ನಲ್ಲಿ‌ ನಾಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಪ್ರಣಾಳಿಕೆ ಯನ್ನು‌ ಬಿಡುಗಡೆಗೊಳಿಸಲಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಚುನಾವಣಾ ಪ್ರಮಾಣಿಕೆ ರಚನಾ ಸಮಿತಿ ಅಧ್ಯಕ್ಷ ಡಾ. ಎಂ. ವೀರಪ್ಪ ಮೊಯಿಲಿ ಪ್ರಣಾಳಿಕೆಗಾಗಿ 15 ಮಂದಿಯ ತಂಡ 4 ತಿಂಗಳು ಶ್ರಮ ವಹಿಸಿದ್ದು ರಾಜ್ಯದ ಸರ್ವ ಜನರ ಸರ್ವಾಂಗೀಣ ಅಭಿವೃದ್ಧಿ, ರಾಜ್ಯದ ಸಮಗ್ರ ಅಭಿವೃದ್ಧಿ, ಯುವಕರಿಗೆ ಉದ್ಯೋಗ , ಮಹಿಳೆಯರ ರಕ್ಷಣೆ, ಶಿಕ್ಷಣ, ಆರೋಗ್ಯ, ಪರಿಸರ ರಕ್ಷಣೆ , ಸುಚಿತ್ವ, ಮೂಲಭೂತ ಸೌಕರ್ಯ ಇನ್ನಿತರ ಅತ್ಯಂತ ಪ್ರಮಖ ವಿಚಾರಗಳ ಬಗ್ಗೆ ಪ್ರಣಾಳಿಕೆಯಲ್ಲಿ ಪ್ರಾಮುಖ್ಯತೆ ನೀಡಲಾಗಿದೆ ಎಂದು ಅವರು ಹೇಳಿದರು.

ಇವರೆಗೆ ರಾಜಕೀಯ ಇತಿಹಾಸದಲ್ಲಿ ಯಾವ ರಾಜಕೀಯ ಪಕ್ಷವೂ ಬಿಡುಗಡೆಗೊಳಿಸದ ರೀತಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ನಾಳೆ ಮುಂಜಾನೆ ಮಂಗಳೂರಿಗೆ ಆಗಮಿಸುವ ರಾಹುಲ್ ಗಾಂಧಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಮಾಡಿ ಬಂಟ್ವಾಳಕ್ಕೆ ತೆರಳಲಿದ್ದಾರೆ ಎಂದು ಹೇಳಿದ ಅವರು ಬಿಡುಗಡೆಗೊಳ್ಳುವ ಈ ಪ್ರನಾಳಿಕೆ ಕುರಿತು ರಾಜ್ಯದ ನಾಲ್ಕು ಕಡೆ ಸಂವಾದ ನಡೆಯಲಿದೆ ಎಂದು ಅವರು ಹೇಳಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *