Connect with us

    DAKSHINA KANNADA

    ಕಾಂಗ್ರೆಸ್ ಮುಳುಗುವ ಹಡಗು: ಮೋನಪ್ಪ ಭಂಡಾರಿ

    ಪುತ್ತೂರು, ಎಪ್ರಿಲ್ 28: ಬಿಜೆಪಿಗೆ 40% ಕಮಿಷನ್ ಸರಕಾರ ಎಂದು ಆರೋಪಿಸುವ ಕಾಂಗ್ರೆಸ್ ನವರ ಬಳಿ ಈ ಕುರಿತ ಒಂದೇ ಒಂದು ಸಾಕ್ಷಾಧಾರಗಳಿಲ್ಲ. ಕಾಂಗ್ರೆಸ್ ಒಂದು ಮುಳುಗುವ ಹಡಗಾಗಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಆರೋಪಿಸಿದರು.

    ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೇಸ್ ಎಲ್ಲಾ ಕಡೆಯಲ್ಲಿ ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ ಮಾಡುತ್ತಿದೆ. ಇದೇ ರೀತಿಯ ಆರೋಪ ಮಾಡಿದ ಕಾಂಗ್ರೆಸ್ ಮುಖಂಡ ಕೆಂಪಯ್ಯ ವಿರುದ್ಧ ಪಕ್ಷ ದೂರು ನೀಡಿದ್ದು, ಆತನ ಬಳಿಯೂ ಕಮಿಷನ್ ಪಡೆದ ಬಗ್ಗೆ ಯಾವುದೇ ಸಾಕ್ಷಾಧಾರಗಳಿಲ್ಲ ಎಂದ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಪ್ರತಿಕ್ರಿಯಿಸಿ, ಕಮಿಷನ್ ಪಡೆದುಕೊಂಡ ಬಗ್ಗೆ ಮಾಹಿತಿ ಇದ್ದಲ್ಲಿ ತಮ್ಮ ಗಮನಕ್ಕೆ ತಂದಲ್ಲಿ ಸೂಕ್ತ ತನಿಖೆ ನಡೆಸುವ ಭರವಸೆಯನ್ನೂ ಈಗಾಗಲೇ ನೀಡಿದ್ದಾರೆ. ಆದರೆ ಕಾಂಗ್ರೆಸ್ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಚುನಾವಣೆಯಲ್ಲಿ ಲಾಭ ಪಡೆದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

    ಮೋಸ, ವಂಚನೆ,ಭ್ರಷ್ಟಾಚಾರ ಕಾಂಗ್ರೇಸ್ ನ ಜನ್ಮಸಿದ್ಧ ಹಕ್ಕು, ಚುನಾವಣೆಯಲ್ಲಿ ಅಭ್ಯರ್ಥಿಗಳಾಗಲು ಕಾಂಗ್ರೇಸ್ ಪಕ್ಷಕ್ಕೆ ಹಣ ಕೊಡಬೇಕು ಎಂದು ಅವರ ಪಕ್ಷದವರೇ ಬಹಿರಂಗವಾಗಿ ಆರೋಪ ಮಾಡಿದ್ದಾರೆ‌. ರಾಜ್ಯದಲ್ಲಿ ಬಿಜೆಪಿ ಪಕ್ಷ 130 ಕ್ಕೂ ಮಿಕ್ಕಿದ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply