Connect with us

    DAKSHINA KANNADA

    ಕಾಂಗ್ರೇಸ್ ಕುಮ್ಮಕ್ಕಿನಿಂದಾಗಿ ದೇಶದ್ರೋಹಿ ಹೇಳಿಕೆಗಳನ್ನು ನೀಡುತ್ತಿದ್ದಾರೆ- ನಳಿನ್ ಕುಮಾರ್ ಕಟೀಲ್

    ಕಾಂಗ್ರೇಸ್ ಕುಮ್ಮಕ್ಕಿನಿಂದಾಗಿ ದೇಶದ್ರೋಹಿ ಹೇಳಿಕೆಗಳನ್ನು ನೀಡುತ್ತಿದ್ದಾರೆ- ನಳಿನ್ ಕುಮಾರ್ ಕಟೀಲ್

    ಪುತ್ತೂರು ಫೆಬ್ರವರಿ 22: ದೇಶದ್ರೋಹಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಇನ್ನೆಂದೂ ಯಾರೂ ದೇಶದ್ರೋಹಿ ಕೆಲಸ ಮಾಡದಂತೆ ನೋಡಿಕೊಳ್ಳುವ ಅಗತ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

    ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಸಿಎಎ ಪ್ರತಿಭಟನೆಯ ಹೆಸರಿನಲ್ಲಿ ದೇಶದ್ರೋಹಿ ಹೇಳಿಕೆಗಳನ್ನು ನೀಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ನಕ್ಸಲ್ ಪರ ವಿಚಾರವುಳ್ಳವರು, ಕಮ್ಯುನಿಷ್ಟರು ಹಾಗೂ ಇವರೆಲ್ಲರ ಹಿಂದೆ ಕಾಂಗ್ರೇಸ್ ಕುಮ್ಮಕ್ಕಿನಿಂದಾಗಿ ಇಂಥಹ ದೇಶದ್ರೋಹಿ ಹೇಳಿಕೆಗಳನ್ನು ನೀಡುವ ಪ್ರಕ್ರಿಯೆಗಳು ನಡೆಯುತ್ತಿದೆ.

    ಇಂಥ ದೇಶದ್ರೋಹಿಗಳಲ್ಲಿ ನಾಲ್ವರಿಗೆ ಸರಿಯಾದ ಕಠಿಣ ಶಿಕ್ಷೆಯಾದಲ್ಲಿ ಮತ್ತೆ ಇಂಥಹ ಪ್ರಕ್ರಿಯೆಗಳಲ್ಲಿ ಯಾರೂ ಗುರುತಿಸಿಕೊಳ್ಳುವುದಿಲ್ಲ ಎಂದ ಅವರು ರಾಜ್ಯ ಸರಕಾರ ಈಗಾಗಲೇ ದೇಶದ್ರೋಹಿ, ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಬಂಧಿಸಿದೆ ಎಂದರು.

    ಪುತ್ತೂರು ಬಿಜೆಪಿ ನೂತನ ಪದಾಧಿಕಾರಿಗಳ ಪದಗ್ರಹಣ ಸಭೆ ಇಂದು ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೂತನ ಪದಾಧಿಕಾರಿಗಳಿಗೆ ಪಕ್ಷದ ಸಂವಿಧಾನ ಹಾಗೂ ನೀತಿ ,ನಿಯಮಗಳ ಕುರಿತು ಮಾಹಿತಿ ನೀಡಿದರು.

    ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರ ಉತ್ತಮ ಯೋಜನೆಗಳ ಮೂಲಕ ಜನಪ್ರೀಯವಾಗಿದ್ದು, ಪದಾಧಿಕಾರಿಗಳು ಈ ಯೋಜನೆಗಳನ್ನು ಜನ ಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಮಾಡಬೇಕಿದೆ. ಪ್ರತಿಯೊಬ್ಬ ಬೂತ್ ಮಟ್ಟದ ಅಧ್ಯಕ್ಷ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಂತೆಯೇ ಆಗಿದ್ದು, ಪಕ್ಷದ ಬಲವರ್ಧನೆಗೆ ಶ್ರಮಿಸಬೇಕೆಂದು ಹೇಳಿದರು.

     

    Share Information
    Advertisement
    Click to comment

    You must be logged in to post a comment Login

    Leave a Reply