LATEST NEWS
ದೇವರಿಗೆ ಆರತಿ ಮಾಡುವ ವೇಳೆ ಬಟ್ಟೆಗೆ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಕೇಂದ್ರದ ಮಾಜಿ ಸಚಿವೆ ಗಿರಿಜಾ ವ್ಯಾಸ್ ನಿಧನ

ಅಹಮದಾಬಾದ್ ಮೇ 01: ಮನೆಯಲ್ಲಿ ದೇವರಿಗೆ ಆರತಿ ಮಾಡುವ ವೇಳೆ ದುಪ್ಪಟ್ಟಾಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕಿ, ಕೇಂದ್ರದ ಮಾಜಿ ಸಚಿವೆ ಗಿರಿಜಾ ವ್ಯಾಸ್ ಗುರುವಾರ ಅಹಮದಾಬಾದ್ನಲ್ಲಿ ನಿಧನರಾಗಿದ್ದಾರೆ.
ಗಿರಿಜಾ ಅವರ ನಿಧನದ ಕುರಿತು ಸಹೋದರ ಗೋಪಾಲ್ ಶರ್ಮಾ ಖಚಿತಪಡಿಸಿದ್ದಾರೆ. ಉದಯಪುರದ ತಮ್ಮ ಮನೆಯಲ್ಲಿ ಏಪ್ರಿಲ್ 2ರಂದು ಗಿರಿಜಾ ವ್ಯಾಸ್ ದೇವರಿಗೆ ಆರತಿ ಮಾಡುವ ವೇಳೆ ಅವರ ಉಡುಪಿಗೆ ಬೆಂಕಿ ತಗುಲಿ ತೀವ್ರ ಸುಟ್ಟಗಾಯಗಳಾಗಿತ್ತು. ಈ ಹಿನ್ನೆಲೆ ಗಿರಿಜಾ ಅವರನ್ನು ಅಹಮದಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲೇ ಗಿರಿಜಾ ವ್ಯಾಸ್ ಕೊನೆಯುಸಿರೆಳೆದಿದ್ದಾರೆ.
