Connect with us

KARNATAKA

ಕಾಂಗ್ರೇಸ್ ಮುಖಂಡ ದಿವಂಗತ ಆರ್. ಧ್ರುವನಾರಾಯಣ ಅವರ ಪತ್ನಿ ನಿಧನ

ಮೈಸೂರು ಎಪ್ರಿಲ್ 07 : ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಏ. 7ರಂದು ನಿಧನರಾಗಿದ್ದಾರೆ.


ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ಸುಮಾರು 10 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಇತ್ತೀಚೆಗೆ, ಪತಿ ಧ್ರುವನಾರಾಯಣ ಅವರ ಅಕಾಲಿಕ ಸಾವಿನಿಂದಾಗಿ ಶಾಕ್ ಗೆ ಒಳಗಾಗಿದ್ದ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಹಾಗಾಗಿ, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಶುಕ್ರವಾರ ನಿಧನರಾಗಿದ್ದಾರೆ. ದರ್ಶನ್ ಸೇರಿದಂತೆ ಇಬ್ಬರು ಪುತ್ರರಿದ್ದಾರೆ. ವಿಜಯನಗರದ ಅವರ ಸ್ವಗೃಹದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ಚಾಮರಾಜನಗರ ಜಿಲ್ಲೆಯ ಸ್ವಗ್ರಾಮ ಹೆಗ್ಗವಾಡಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *