Connect with us

LATEST NEWS

ಧರ್ಮದೇಟು ತಿಂದ ಅಬ್ದುಲ್ ಸತ್ತಾರ್ ಕಾಂಗ್ರೇಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ

ಧರ್ಮದೇಟು ತಿಂದ ಅಬ್ದುಲ್ ಸತ್ತಾರ್ ಕಾಂಗ್ರೇಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ

ಮಂಗಳೂರು ಮಾರ್ಚ್ 13: ಮಂಗಳೂರು ಮಹಾನಗರಪಾಲಿಕೆಯ ಮಹಿಳಾ ಕಾರ್ಪೋರೇಟರ್ ಜೊತೆ ಅನುಚಿತವಾಗಿ ವರ್ತಿಸಿ ಅವರಿಂದಲೇ ಧರ್ಮದೇಟು ತಿಂದ ಕಾಂಗ್ರೇಸ್ ಮುಖಂಡನನ್ನು ಪಕ್ಷದ ಹುದ್ದೆಯಿಂದ ವಜಾಗೊಳಿಸಲಾಗಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್,

ಪಕ್ಷದ ಮಹಿಳಾ ಕಾರ್ಪೋರೇಟರ್ ಅವರೊಂದಿಗೆ ಅನುಚಿತವಾಗಿ ವರ್ತಿಸಿದ ಹಿನ್ನಲೆಯಲ್ಲಿ ಅಬ್ದುಲ್ ಸತ್ತಾರ್ ಅವರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಿದ್ದಾರೆ.

ಕಾಂಗ್ರೇಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಅಬ್ದುಲ್ ಸತ್ತಾರ ಮಂಗಳೂರು ಮಹಾನಗರಪಾಲಿಕೆಯ ಸುರತ್ಕಲ್ ಕ್ಷೇತ್ರದ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಅವರ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಹಿನ್ನಲೆಯಲ್ಲಿ ಆತನ ವರ್ತನೆಗೆ ಪ್ರತಿಭಾ ಕುಳಾಯಿ ಸರಿಯಾಗಿ ಧರ್ಮದೇಟನ್ನು ಕೂಡ ನೀಡಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *