Connect with us

    LATEST NEWS

    ಕಾಂಗ್ರೇಸ್ ಮೊದಲ ಪಟ್ಟಿ ಬಿಡುಗಡೆ – ಬೆಳ್ತಂಗಡಿಗೆ ರಕ್ಷಿತ್ ಶಿವರಾಂ ಮೂಡಬಿದಿರೆಗೆ ಮಿಥುನ್ ರೈ

    ಮಂಗಳೂರು ಮಾರ್ಚ್ 25: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಶನಿವಾರ ಬೆಳಿಗ್ಗೆ ಪ್ರಕಟಿಸಿದೆ. ದಕ್ಷಿಣಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

    ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೇಸ್ ತನ್ನ ಮೊದಲ ಪಟ್ಟಿಯನ್ನು ಇಂದು ಬಿಡುಗಡಗೊಳಿಸಿದೆ. ಬಹುತೇಕ ಹಾಲಿ ಶಾಸಕರಿಗೆ ಈ ಬಾರಿ ಮತ್ತೆ ಅವಕಾಶ ದೊರೆತಿದೆ. ಇಂದು ಬಿಡುಗಡೆಯಾದ ಪಟ್ಟಿಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

    ಮಂಗಳೂರು – ಯುಟಿ ಖಾದರ್
    ಮೂಡಬಿದಿರೆ – ಮಿಥುನ್ ರೈ
    ಬೆಳ್ತಂಗಡಿ – ರಕ್ಷಿತ್ ಶಿವರಾಂ
    ಸುಳ್ಯ – ಕೃಷ್ಣಪ್ಪ ಜಿ
    ಬಂಟ್ವಾಳ – ರಮಾನಾಥ ರೈ

    ದಕ್ಷಿಣಕನ್ನಡ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಇನ್ನು ಅಭ್ಯರ್ಥಿಗಳ ಆಯ್ಕೆಯಾಗ ಬೇಕಿದೆ.

     

     

    Share Information
    Advertisement
    Click to comment

    You must be logged in to post a comment Login

    Leave a Reply