DAKSHINA KANNADA
ಸಂಸದ ನಳಿನ್ ಒರ್ವ ಪೆದ್ದ – ಕಾಂಗ್ರೇಸ್ ಮುಖಂಡ ಐವನ್ ಡಿಸೋಜಾ
ಪುತ್ತೂರು ಜುಲೈ 07: ಪೆಟ್ರೋಲ್, ಡೀಸೇಲ್ ಬೆಲೆ ಏರಿಕೆ ಖಂಡಿಸಿ ಪುತ್ತೂರು ಬ್ಲಾಕ್ ಕಾಂಗ್ರೇಸ್ ವತಿಯಿಂದ ಸೈಕಲ್ ಜಾಥಾ ನಡೆಸಲಾಯಿತು.
ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದರು. ಪುತ್ತೂರು ನೆಹರೂ ನಗರದಿಂದ ದರ್ಬೆ ವೃತ್ತದವರೆಗೆ ಸೈಕಲ್ ಜಾಥಾ ನಡೆಸಲಾಯಿತು. ಈ ಸಂದರ್ಭ ಐವನ್ ಡಿಸೋಜಾ ಸೇರಿದಂತೆ ಹಲವು ಕಾಂಗ್ರೇಸ್ ಮುಖಂಡರಿಂದ ಸೈಕಲ್ ತುಳಿದು, ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ನಂತರ ಮಾತನಾಡಿದ ಕಾಂಗ್ರೇಸ್ ಮುಖಂಡ ಐವನ್ ಡಿಸೋಜಾ ಸಂಸದ ನಳಿನ್ ಕುಮಾರ್ ವಿರುದ್ದ ವಾಗ್ದಾಳಿ ನಡೆಸಿದರು. ಸಂಸದ ನಳಿನ್ ಒರ್ವ ಪೆದ್ದ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ಸೈಕಲ್ ಜಾಥಾದಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.
You must be logged in to post a comment Login