LATEST NEWS
ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಸ್ಥಿತಿ ಗಂಭೀರ – ಮಂಗಳೂರಿನಲ್ಲಿ ನಡೆಯಬೇಕಿದ್ದ ಕಾಂಗ್ರೇಸ್ ಸಭೆ ರದ್ದು
ಮಂಗಳೂರು ಜುಲೈ 22: ಕಾಂಗ್ರೇಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನಲೆ ಶುಕ್ರವಾರ ಮಂಗಳೂರಿನಲ್ಲಿ ನಡೆಯಬೇಕಾಗಿದ್ದ ಕಾಂಗ್ರೇಸ್ ನ ಸಭೆಯನ್ನು ರದ್ದುಗೊಳಿಸಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನಾಳೆ ಮಂಗಳೂರಿನಲ್ಲಿ ಕಾಂಗ್ರೇಸ್ ಸಭೆಯಲ್ಲಿ ಪಾಲ್ಗೊಳ್ಳುವವರಿದ್ದರು, ಆದರೆ ಕಾಂಗ್ರೇಸ್ ಹಿರಿಯ ಮುಖಂಡ ಕೇಂದ್ರದ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನಲೆ ಮಂಗಳೂರಿನಲ್ಲಿ ನಡೆಯುವ ಸಭೆ ರದ್ದುಗೊಳಿಸಲಾಗಿದೆ.
ಇಂದು ಆಸ್ಕರ್ ಫೆರ್ನಾಂಡಿಸ್ ಅವರು ಆರೋಗ್ಯ ವಿಚಾರಿಸಲು ಡಿ.ಕೆ. ಶಿವಕುಮಾರ್ ಮಂಗಳೂರಿಗೆ ಆಗಮಿಸಲಿದ್ದಾರೆ. ಉಳಿದಂತೆ ತುಮಕೂರಿನಲ್ಲಿ ಶನಿವಾರ ನಡೆಯಲಿರುವ ಸಭೆ ನಿಗದಿಯಂತೆ ಮುಂದುವರಿಯಲಿದೆ.
You must be logged in to post a comment Login