Connect with us

    LATEST NEWS

    ಕೇಂದ್ರ ಸರಕಾರ ವಿರುದ್ದ ಮಹಿಳಾ ಕಾಂಗ್ರೇಸ್ ಕಾರ್ಯಕರ್ತರ ಪ್ರತಿಭಟನೆ

    ಕೇಂದ್ರ ಸರಕಾರ ವಿರುದ್ದ ಮಹಿಳಾ ಕಾಂಗ್ರೇಸ್ ಕಾರ್ಯಕರ್ತರ ಪ್ರತಿಭಟನೆ

    ಮಂಗಳೂರು ಮೇ 26: ಕೇಂದ್ರ ಸರಕಾರ ವಿರುದ್ದ ಮಂಗಳೂರಿನಲ್ಲಿ ಮಹಿಳಾ ಕಾಂಗ್ರೇಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
    ಮಂಗಳೂರಿನ ಮಲ್ಲಿಕಟ್ಟೆ ಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಸೇರಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

    ಕೇಂದ್ರ ಸರಕಾರ ಹಾಗು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು. ತೈಲ ಬೆಲೆಯೇರಿಕೆ ವಿಚಾರದಲ್ಲಿ ಮೋದಿ ಸರಕಾರಕ್ಕೆ ಧಿಕ್ಕಾರ ಕೂಗಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಭಿತ್ತಿಪತ್ರಗಳನ್ನು ಹಿಡಿದು ಮೋದಿ ವಿರೋಧಿ ಘೋಷಣೆ ಕೂಗಿದ್ದಾರೆ.

    ಕೇಂದ್ರ ಸರಕಾರದ ಜನ ವಿರೋಧಿ ನೀತಿ ಇಂದಾಗಿ ದೇಶದಲ್ಲಿ ಆಹಾರ ಸಾಮಗ್ರಿಗಳ ಬೆಲೆ ಗಗನ ಕ್ಕೆರಿದ್ದು ಜನಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

    ಪ್ರತಿಭಟನೆಯಲ್ಲಿ ಭಾಗವಹಿಸಿದ ಶಾಸಕ ಯು ಟಿ‌ ಖಾದರ್ ಮೋದಿ‌ ಅಧಿಕಾರಕ್ಕೆ ಬಂದಾಗ ತಾನು ದೇಶದ ಚೌಕಿದಾರ್ ಆಗುತ್ತೇನೆ ಎಂದಿದ್ದರು.ಆದರೆ ಇವರ‌ ಜೊತೆ ಪೊಟೋ ತೆಗೆಸಿಕೊಂಡು ಕೆಲವರು ಸಾವಿರಾರು ಕೋಟಿ ಸಮೇತ ವಿದೇಶಕ್ಕೆ ಹಾರಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು.

    Share Information
    Advertisement
    Click to comment

    You must be logged in to post a comment Login

    Leave a Reply