LATEST NEWS
ಡಿಕೆಶಿ ಬಂಧನ ವಿರೋಧಿಸಿ ಪ್ರತಿಭಟನೆ | ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು

ಡಿಕೆಶಿ ಬಂಧನ ವಿರೋಧಿಸಿ ಪ್ರತಿಭಟನೆ | ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು
ಮಂಗಳೂರು ಸೆಪ್ಟೆಂಬರ್ 4: ಕಾಂಗ್ರೇಸ್ ಮುಖಂಡ ಡಿ.ಕೆ.ಶಿವಕುಮಾರ್ ಬಂಧನವನ್ನು ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೇಸ್ ಹಾಗೂ ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು.
ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಸೇರಿದ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೇಂದ್ರ ಸರಕಾರದ ನಿರ್ದೇಶನದಂತೆ ತನಿಖಾ ಸಂಸ್ಥೆಗಳು ನಡೆಯುತ್ತಿದ್ದು, ಕಾಂಗ್ರೇಸ್ ಮುಖಂಡರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆಯಲ್ಲಿ ನಿರತರಾದ ಪ್ರತಿಭಟನಾಕಾರರು ಅಮಿತ್ ಶಾ ಹಾಗೂ ನರೇಂದ್ರ ಮೋದಿ ಪ್ರತಿಕೃತಿಯನ್ನು ದಹಿಸುವ ಯತ್ನವನ್ನು ನಡೆಸಿದರು.
ಈ ಸಂದರ್ಭದಲ್ಲಿ ಪೋಲೀಸರು ಪ್ರತಿಭಟನಾಕಾರರನ್ನು ತಡೆದರಲ್ಲದೆ, ಬೆಂಕಿ ಹಾಕಲು ತಂದಿದ್ದ ಪೆಟ್ರೋಲನ್ನು ಪ್ರತಿಭಟನಾಕಾರರ ಕೈಯಿಂದ ಕಸಿದುಕೊಂಡರು. ಕಾಂಗ್ರೇಸ್ ಮುಖಂಡರಾದ ಐವನ್ ಡಿಸೋಜಾ, ರಮಾನಾಥ ರೈ, ಅಭಯಚಂದ್ರ ಜೈನ್ ಸೇರಿದಂತೆ ಹಲವನ್ನು ಪೋಲೀಸರು ಬಂಧಿಸಿದರು. ಇದೇ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ಪೋಲೀಸರ ಮಧ್ಯೆ ನೂಕಾಟ-ತಳ್ಳಾಟವೂ ನಡೆಯಿತು.