Connect with us

    LATEST NEWS

    ಕಾಂಗ್ರೇಸ್ ಎರಡನೇ ಪಟ್ಟಿ ಬಿಡುಗಡೆ – ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಪ್ರಸಾದ್ ರಾಜ್ ಕಾಂಚನ್ ಅಭ್ಯರ್ಥಿ

    ಉಡುಪಿ ಎಪ್ರಿಲ್ 06 : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೇಸ್ ತನ್ನ ಎರಡನೇ ಪಟ್ಟಿ ಪ್ರಕಟಿಸಿದ್ದು, ಉಡುಪಿ ವಿಧಾನಸಭೆ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ.


    ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್‌ ಇಂದು ಪ್ರಕಟಿಸಿದೆ.ಉಳಿದ 99 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಚುನಾವಣಾ ಸಮಿತಿಯು ಮಂಗಳವಾರ ಹಾಗೂ ಬುಧವಾರ ಭಾರಿ ಕಸರತ್ತು ನಡೆಸಿತ್ತು. ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು 42 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

    ಉಡುಪಿ ವಿಧಾನ ಸಭೆ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚಾನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ನಿರೀಕ್ಷೆಯಂತೆ ಮೊಗವೀರರಿಗೆ ಕಾಂಗ್ರೆಸ್ ಮಣೆ ಹಾಕಿದೆ.ಪ್ರಸಾದ್ ರಾಜ್ ಈಗಾಗಲೇ ಪಕ್ಷದ ಪ್ರಚಾರ ಕಾರ್ಯದಲ್ಲಿ ಬಿರುಸಿನಲ್ಲಿ ತೊಡಗಿಸಿಕೊಂಡಿದ್ದಾರೆ.
    ಕರಾವಳಿಯ ಬಾಕಿ ಉಳಿದ ಕ್ಷೇತ್ರಗಳಾದ, ಪುತ್ತೂರು, ಮಂಗಳೂರು ದಕ್ಷಿಣ – ಉತ್ತರ, ಕಾರ್ಕಳ, ಕಾಪು ಬೈಂದೂರು, ಇನ್ನು ಟಿಕೆಟ್ ಘೋಷಣೆಯಾಗಿಲ್ಲ.

    Share Information
    Advertisement
    Click to comment

    You must be logged in to post a comment Login

    Leave a Reply