Connect with us

    KARNATAKA

    ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಾಲಿಬಾನ್ ಸಂಘಟನೆ ನಾಯಕರಂತೆ ಮಾತನಾಡುತ್ತಿದ್ದಾರೆ – ಕಾಂಗ್ರೇಸ್

    ಬೆಂಗಳೂರು ಅಕ್ಟೋಬರ್ 14: ಮಂಗಳೂರಿನಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್‌ಗಿರಿಯನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಅವರು ತಾಲಿಬಾನ್ ಸಂಘಟನೆಯ ನಾಯಕರಂತೆ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೇಸ್ ಟೀಕಿಸಿದೆ.


    ಈ ಕುರಿತು ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌ ಪಕ್ಷವು, ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥಿಸಿದ ಮುಖ್ಯಮಂತ್ರಿ @BSBommai ಅವರು ತಾಲಿಬಾನ್ ಸಂಘಟನೆಯ ನಾಯಕರಂತೆ ಮಾತಾಡಿದ್ದಾರೆ.


    ಬಿಜೆಪಿಯ ಆಡಳಿತಕ್ಕೆ ಸಾಮಾಜಿಕ ಭಾವನೆಗಳೇ ಆಧಾರ ಎಂದಾದರೆ ದೇವದಾಸಿ ಪದ್ಧತಿ, ಅಸ್ಪೃಶ್ಯತೆಯ ಆಚರಣೆ, ಬೆತ್ತಲೆ ಸೇವೆಯಂತಹ ಸಾಮಾಜಿಕ ಆಚರಣೆಗಳ ಹಿಂದಿದ್ದ ‘ಭಾವನೆ’ಗಳನ್ನು ಪುರಸ್ಕರಿಸಲಾಗುತ್ತದೆಯೇ? ಎಂದು ಪ್ರಶ್ನಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply