Connect with us

LATEST NEWS

ಕಾಂಗ್ರೇಸ್ ಪಟ್ಟಿ – ಕಾಪುಗೆ ವಿನಯ್ ಕುಮಾರ್ ಸೊರಕೆ, ಬೈಂದೂರಿಗೆ ಗೋಪಾಲ ಪೂಜಾರಿ ಅಭ್ಯರ್ಥಿ

ಉಡುಪಿ ಮಾರ್ಚ್ 25: ರಾಜ್ಯ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೇಸ್ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಉಡುಪಿ ಜಿಲ್ಲೆಯ 3 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಪ್ರಮುಖ 2 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಇನ್ನು ನಡೆದಿಲ್ಲ.


ಮೊದಲ ಪಟ್ಟಿಯಲ್ಲಿ ನಿರೀಕ್ಷೆಯಂತೆ ಕಾಪುವಿಗೆ ವಿನಯ್ ಕುಮಾರ್ ಸೊರಕೆ, ಬೈಂದೂರು ಗೋಪಾಲ ಪೂಜಾರಿ ಮತ್ತು ಕುಂದಾಪುರಕ್ಕೆ ದಿನೇಶ್ ಹೆಗ್ಡೆ ಮೊಳಹಳ್ಳಿಗೆ ಟಿಕೆಟ್ ಘೋಷಿಸಲಾಗಿದೆ. ಇನ್ನು ಉಡುಪಿ ಜಿಲ್ಲೆಯ ಪ್ರಮುಖ ಎರಡು ಹೈ ಪ್ರೊಫೈಲ್ ಕ್ಷೇತ್ರಗಳಾದ ಉಡುಪಿ ಮತ್ತು ಕಾರ್ಕಳ ಕ್ಷೇತ್ರಗಳಿಗೆ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಅಭ್ಯರ್ಥಿ ಘೋಷಣೆ ಮಾಡದಿರುವುದು ಕುತೂಹಲ ಕೆರಳಿಸಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *