Connect with us

    DAKSHINA KANNADA

    ಭಜರಂಗದಳವನ್ನು ನಿಷೇಧಿಸಲು ಹೊರಟ ಕಾಂಗ್ರೇಸ್ ಗೆ ಮತ ಕೇಳಲು ಪ್ರವೇಶವಿಲ್ಲ: ಹಿಂದೂ ಸಂಘಟನೆಗಳ ಪೋಸ್ಟರ್ ಅಭಿಯಾನ

    ಪುತ್ತೂರು, ಮೇ 04: ಕಾಂಗ್ರೇಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ವಿಚಾರವಾಗಿ ಮನೆ ಮನೆಯಲ್ಲಿ ಕಾಂಗ್ರೆಸ್ ವಿರುದ್ಧ ಹಿಂದೂ ಸಂಘಟನೆಗಳು ಪೋಸ್ಟರ್  ಅಭಿಯಾನ ನಡೆಸುವುದಾಗಿ ವಿಶ್ವ ಹಿಂದೂ ಪರಿಷತ್,ಭಜರಂಗದಳ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿಕೆ ನೀಡಿದ್ದಾರೆ.

    ಹಿಂದುತ್ವದ ಶಕ್ತಿ ಕೇಂದ್ರ ಪುತ್ತೂರಿನಲ್ಲಿ ಜಾಗೃತಿ‌ ಸಭೆ ಆಯೋಜನೆ ಮಾಡಿದ್ದು, ಜಿಲ್ಲೆಯ ಮನೆ ಮನೆಯಲ್ಲಿ ಕಾಂಗ್ರೆಸ್ ವಿರುದ್ಧ ಹಿಂದೂ ಸಂಘಟನೆಗಳು ಪೋಸ್ಟರ್ ಅಂಟಿಸಲಿದ್ದಾರೆ.

    ನನ್ನ ಮನೆ ಹಿಂದೂ ಮನೆ, ಧರ್ಮ ರಕ್ಷಿಸುವ ಭಜರಂಗದಳವನ್ನು ನಿಷೇಧಿಸಲು ಹೊರಟ ಕಾಂಗ್ರೇಸ್ ಗೆ ಮತ ಕೇಳಲು ಪ್ರವೇಶವಿಲ್ಲ ಎನ್ನುವ ಪೋಸ್ಟರ್ ಅಂಟಿಸಲಿದ್ದಾರೆ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply