DAKSHINA KANNADA
ಅವಹೇಳನಕಾರಿ ಪೋಸ್ಟ್ ಹಾಕಿದಾತನ ವಿರುದ್ಧ ಕ್ರಮಕ್ಕೆ ಕಾಂಗ್ರೇಸ್ ಒತ್ತಾಯ…
ಪುತ್ತೂರು, ಅಕ್ಟೋಬರ್ 22: ಕಾಂಗ್ರೇಸ್ ಮುಖಂಡೆ ಪ್ರತಿಭಾ ಕುಳಾಯಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ ಕಹಳೆ ನ್ಯೂಸ್ ಎನ್ನುವ ವೆಬ್ ಸೈಟ್ ನ ಸಂಪಾದಕ ಶ್ಯಾಮ ಸುದರ್ಶನ್ ಹೊಸಮೂಲೆ ಎನ್ನುವಾತನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಪುತ್ತೂರು ಮಹಿಳಾ ಕಾಂಗ್ರೇಸ್ ಒತ್ತಾಯಿಸಿದೆ.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ಟೋಲ್ಗೇಟ್ ವಿರೋಧಿ ಹೋರಾಟದಲ್ಲಿ ನಾನು ಕೂಡಾ ಭಾಗವಹಿಸಿದ್ದೆ. ಪ್ರತಿಭಾ ಕುಳಾಯಿಯನ್ನು ಪೋಲೀಸರು ಬಂಧಿಸಲು ಮುಂದಾದಾಗ ಅವರು ರಸ್ತೆಯಲ್ಲಿ ಮಲಗಿ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದರು.
ಇದನ್ನೇ ಗುರಿಯಾಗಿಸಿಕೊಂಡು ಬಿಜೆಪಿಗರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದ್ದರು. ಈ ವಿಡಿಯೋ ಗೆ ಕಹಳೆ ನ್ಯೂಸ್ ನ ಶ್ಯಾಮ ಸುದರ್ಶನ್ ಅವಹೇಳನಕಾರಿ ಕಮೆಂಟ್ ಮಾಡಿದ್ದಾನೆ. ಈತನ ವಿರುದ್ಧ ಪೋಲೀಸರು ತಕ್ಷಣ ಕ್ರಮ ಕೈಗೊಳ್ಳಬೇಕು. ಮಹಿಳೆಯೋರ್ವರಿಗೆ ಅವಹೇಳನಕಾರಿ ಕಮೆಂಟ್ ಮಾಡಿದ ಶ್ಯಾಮ ಸುದರ್ಶನ್ ಬಹಿರಂಗ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ ಅವರು ಈತನ ವಿರುದ್ಧ ಪುತ್ತೂರಿನಲ್ಲಿ ಪ್ರಕರಣ ದಾಖಲಿಸಲು ತೀರ್ಮಾನಿಸಲಾಗಿದೆ ಎಂದರು.
You must be logged in to post a comment Login