Connect with us

LATEST NEWS

ಕಾಂಗ್ರೇಸ್ ಪಕ್ಷಕ್ಕೆ ಬಹುಮತ ಬಂದರೆ ರಾಹುಲ್ ಪ್ರಧಾನಿಯಾಗ್ತಾರೆ – ಪಿ. ಚಿದಂಬರಂ

ಕಾಂಗ್ರೇಸ್ ಪಕ್ಷಕ್ಕೆ ಬಹುಮತ ಬಂದರೆ ರಾಹುಲ್ ಪ್ರಧಾನಿಯಾಗ್ತಾರೆ – ಪಿ. ಚಿದಂಬರಂ

ಮಂಗಳೂರು ಮೇ 9: ಆರ್ ಎಸ್ಎಸ್ ಮತ್ತು ಬಿಜೆಪಿ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಹೊರಟಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಈ ಹಿಂದಿನ ಬಿಜೆಪಿ ಸರಕಾರ ಅತೀ ಕೆಟ್ಟ ಸರಕಾರವಾಗಿತ್ತು, ಆ ಸಂದರ್ಭದಲ್ಲಿ ರಾಜ್ಯ 5 ವರ್ಷದಲ್ಲಿ‌ ಮೂರು ಮುಖ್ಯಮಂತ್ರಿಗಳನ್ನು ನೋಡಬೇಕಾಯಿತು ಎಂದು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಾಂಗ್ರೇಸ್ ಸರಕಾರವನ್ನು ಭ್ರಷ್ಟಸರಕಾರ ಎಂದಿದ್ದಾರೆ. ರಾಜ್ಯ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದರೆ , ಕರ್ನಾಟಕ ರಾಜ್ಯ ಇಷ್ಟು ಅಭಿವೃದ್ದಿಯಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

2019ಕ್ಕೆ ರಾಹುಲ್ ಗಾಂಧಿ ಪ್ರಧಾನಿಯಾಗುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿಯನ್ನು ಮೋದಿ ತೀರ್ಮಾನ ಮಾಡೋದಲ್ಲ, ಅದನ್ನು ಕಾಂಗ್ರೆಸ್ ಹಿರಿಯ ನಾಯಕರು ನಿರ್ಧಾರ ಮಾಡ್ತಾರೆ ಎಂದರು. ಕಾಂಗ್ರೇಸ್ ಪಕ್ಷಕ್ಕೆ ಬಹುಮತ ಬಂದರೆ ರಾಹುಲ್ ಪ್ರಧಾನಿಯಾಗ್ತಾರೆ, ಆದರೆ ಈ ವಿಚಾರವನ್ನು ಕಾಂಗ್ರೆಸಿನ ಹಿರಿಯ ನಾಯಕರು ನಿರ್ಧರಿಸುತ್ತಾರೆ ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *