DAKSHINA KANNADA
ವಿಧಾನಸೌಧಕ್ಕೆ ಅಗೌರವ ತೋರಿರುವ ಕಾಂಗ್ರೆಸಿಗರು, ಕಾರ್ಯಕರ್ತರಿಗೆ ಗೌರವ ಕೊಡ್ತಾರಾ: ನಳಿನ್ ಕುಮಾರ್ ಕಟೀಲು
ಮಂಗಳೂರು, ಜುಲೈ 11: ದೇವಾಲಯದ ಪ್ರತೀಕವಿರುವ ವಿಧಾನಸೌಧಕ್ಕೆ ಅಗೌರವ ತೋರುವ ಕಾಂಗ್ರೆಸಿಗರು, ಕಾರ್ಯಕರ್ತರಿಗೆ ಗೌರವ ತೋರುತ್ತಾರಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪ್ರಶ್ನಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕಾರ್ಯಕರ್ತರೋರ್ವರಿಗೆ ಕಪಾಳಮೋಕ್ಷ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಈ ಪ್ರತಿಕ್ರಿಯೆ ನೀಡಿದರು. ರಾಜಕಾರಣಿಗಳು ಯಾರೇ ಆಗಲಿ ಎಲ್ಲೆ ಮೀರಿ ವರ್ತಿಸಬಾರದು. ಇದು ಸರಿಯಾದ ನಡತೆಯಲ್ಲ. ಕಾಂಗ್ರೆಸಿಗರ ಸಂಸ್ಕೃತಿಯನ್ನು ಇದು ಬಿಂಬಿಸುತ್ತದೆ. ಕಾಂಗ್ರೆಸಿಗರು ಹಲ್ಲೆ ಮಾಡಿರೋದು ಇದು ಮೊದಲೇನಲ್ಲ. ವಿಧಾನಸೌಧಕ್ಕೆ ಸಿದ್ದರಾಮಯ್ಯ ಹೇಗೆ ಪ್ರವೇಶಿಸಿದ್ದಾರೆಂದು ಎಲ್ಲರಿಗೆ ಗೊತ್ತಿದೆ. ಕೈಚಾಚಿ, ಯುದ್ಧಕ್ಕೆ ಕರೆದು, ತೊಡೆತಟ್ಟಿ ಒಳಹೊಕ್ಕಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸಿಗರ ವ್ಯಕ್ತಿತ್ವದಲ್ಲಿಯೇ ರೌಡಿತನ ಕಾಣಿಸುತ್ತದೆ. ಅವರ ಇತಿಹಾಸ ತೆಗೆದು ನೋಡಿದರೆ, ರೌಡಿ ಮಾತ್ರವಲ್ಲ ಈ ದೇಶದಲ್ಲಿ ಎಲ್ಲಾ ಕೆಟ್ಟಚಾಳಿಗಳಿಗೆ ಪ್ರೇರಣೆ ಅವರೇ. ರಾಜಕೀಯ ಕ್ಷೇತ್ರದಲ್ಲಿರುವ ನಾನು ವೈಯುಕ್ತಿಕವಾಗಿ ಮಾತನಾಡುವುದಿಲ್ಲ. ಸಮಾಜ, ಜನರು ನಮ್ಮನ್ನು ಗಮನಿಸುತ್ತಾರೆ. ಸಹಜವಾಗಿ ಕಾರ್ಯಕರ್ತರು, ಜನರು ಬೇಡಿಕೆ, ಅಪೇಕ್ಷೆ ಮತ್ತು ಇಚ್ಛೆಯಿಂದ ಬರುತ್ತಿರುತ್ತಾರೆ. ಬಂದಾಗ ಗೌರವಯುತವಾಗಿ ನಡೆಸಿಕೊಳ್ಳಬೇಕಾಗಿರುವುದು ಸಂಸ್ಕೃತಿ ಎಂದು ನಳಿನ್ ಕುಮಾರ್ ಕಟೀಲು ಹೇಳಿದರು.
Video:
You must be logged in to post a comment Login