LATEST NEWS
ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಪ್ರಧಾನಿ ಮೋದಿ ಅವರ ಸೋಲು: ಜೈರಾಮ್ ರಮೇಶ್
ನವದೆಹಲಿ, ಮೇ13: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆದ ಸೋಲು ಎಂದು ಕಾಂಗ್ರೆಸ್ ಪಕ್ಷವು ಹೇಳಿದೆ. ಬಿಜೆಪಿ ತನ್ನ ಚುನಾವಣಾ ಪ್ರಚಾರವನ್ನು ‘ಪ್ರಧಾನಿ ಮೇಲಿನ ಜನಾದೇಶ’ ವನ್ನಾಗಿ ಮಾಡಿಕೊಂಡಿತ್ತು ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
ಚುನಾವಣಾ ಆಯೋಗದ ಮೂಲಗಳ ಪ್ರಕಾರ ಕರ್ನಾಟಕದಲ್ಲಿ ಕಾಂಗ್ರೆಸ್ 117 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 75 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇದು 2024 ರ ಸಂಸತ್ತಿನ ಚುನಾವಣೆಗೆ ಎರಡೂ ಪಕ್ಷಗಳಿಗೂ ಅಗ್ನಿಪರೀಕ್ಷೆ ಇರುವುದನ್ನು ಪ್ರದರ್ಶಿಸುತ್ತಿದೆ.
‘ಕರ್ನಾಟಕದಲ್ಲಿ ಫಲಿತಾಂಶಗಳು ಹೊರ ಬೀಳುತ್ತಿದ್ದಂತೆಯೇ ಕಾಂಗ್ರೆಸ್ ಗೆದ್ದಿರುವುದು ಮತ್ತು ಪ್ರಧಾನಿ ಸೋತಿರುವುದು ಖಚಿತವಾಗಿದೆ. ಬಿಜೆಪಿಯು ತನ್ನ ಚುನಾವಣಾ ಪ್ರಚಾರವನ್ನು ಪ್ರಧಾನಿ ಮೇಲಿನ ಜನಾದೇಶ ಮತ್ತು ರಾಜ್ಯಕ್ಕೆ ಅವರ ‘ಆಶೀರ್ವಾದ’ ಎಂದು ತಿಳಿದುಕೊಂಡಿತು. ಆದರೆ ಅದನ್ನು ತಿರಸ್ಕರಿಸಲಾಗಿದೆ!’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಈ ಬಾರಿ ಚುನಾವಣೆಯನ್ನು ಜೀವನೋಪಾಯ ಮತ್ತು ಆಹಾರ ಭದ್ರತೆ, ಬೆಲೆ ಏರಿಕೆ, ರೈತರ ಸಂಕಷ್ಟ, ವಿದ್ಯುತ್ ಪೂರೈಕೆ, ನಿರುದ್ಯೋಗ ಮತ್ತು ಭ್ರಷ್ಟಾಚಾರದಂತಹ ಸ್ಥಳೀಯ ಸಮಸ್ಯೆಗಳ ಮೇಲೆ ಎದುರಿಸಿದೆ ಎಂದು ಅವರು ಹೇಳಿದರು.
‘ಪ್ರಧಾನಿ ವಿಭಜನೆ ಮತ್ತು ಧ್ರುವೀಕರಣಕ್ಕೆ ಪ್ರಯತ್ನಿಸಿದರು. ಕರ್ನಾಟಕದಲ್ಲಿ ಮತವು ಬೆಂಗಳೂರಿನಲ್ಲಿ ಆರ್ಥಿಕ ಬೆಳವಣಿಗೆಯನ್ನು ಸಾಮಾಜಿಕ ಸಾಮರಸ್ಯದೊಂದಿಗೆ ಸಂಯೋಜಿಸುವ ಎಂಜಿನ್ಗೆ ಆಗಿದೆ’ ಎಂದು ರಮೇಶ್ ಹೇಳಿದರು.
You must be logged in to post a comment Login