LATEST NEWS
ಕುಕ್ಕೆ ಸುಬ್ರಹ್ಮಣ್ಯದ ಅರ್ಚಕರಿಗೆ ಲಾಠಿ ಬೀಸಿದ ಪೇದೆ ಅಮಾನತು
ಕುಕ್ಕೆ ಸುಬ್ರಹ್ಮಣ್ಯದ ಅರ್ಚಕರಿಗೆ ಲಾಠಿ ಬೀಸಿದ ಪೇದೆ ಅಮಾನತು
ಸುಬ್ರಹ್ಮಣ್ಯ ಮಾರ್ಚ್ 30: ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯದ ಅರ್ಚಕರಿಗೆ ಲಾಠಿ ಏಟು ಕೊಟ್ಟ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆದಿ ಸುಬ್ರಹ್ಮಣ್ಯದ ಅರ್ಚಕ ಶ್ರೀನಿವಾಸ್ ಮೇಲೆ ಶನಿವಾರ ಶಂಕರ್ ಲಾಠಿ ಬೀಸಿದ್ದರು. ಸಂಜೆಯ ಪೂಜೆಗಾಗಿ ಆದಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿವುದಾಗಿ ದೇವಾಲದ ಕೀಯನ್ನು ತೋರಿಸಿದರೂ ಥಳಿಸಿದ್ದರು. ಪೊಲೀಸ್ ಸಿಬಂದಿಯ ಮೇಲೆ ಅರ್ಚಕ ವರ್ಗ ಎಸ್ಪಿ ಐಜಿಪಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ದೂರು ನೀಡಿದ್ದರು.
ಈ ಹಿನ್ನಲೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಶಂಕರ್ ಸಂಸಿಯನ್ನು ಎಸ್ಪಿ ಎಂ. ಲಕ್ಷ್ಮೀ ಪ್ರಸಾದ್ ಅವರು ಅಮಾನತುಗೊಳಿಸಿದ್ದಾರೆ. ಮೇಲ್ನೋಟಕ್ಕೆ ಪೊಲೀಸ್ ಸಿಬಂದಿಯ ದುರ್ವರ್ತನೆ ಕಂಡು ಬಂದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸಿದ್ದಾರೆ.
You must be logged in to post a comment Login