National
ಕಂಟೈನರ್ ಲಾರಿಗೆ ಖಾಸಗಿ ಬಸ್ ಡಿಕ್ಕಿ – 11 ಮಂದಿ ಬೆಂಕಿಗಾಹುತಿ….!!
ಮುಂಬೈ ಅಕ್ಟೋಬರ್ 08: ಖಾಸಗಿ ಬಸ್ ಒಂದು ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 11 ಮಂದಿ ಸಾವನಪ್ಪಿದ್ದು, 24 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ.
ಮಹಾರಾಷ್ಟ್ರದ ನಾಸಿಕ್ ಔರಂಗಾಬಾದ್ ರಸ್ತೆಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಅಪಘಾತದ ಬೆನ್ನಲ್ಲೇ ಲಕ್ಷುರಿ ಬಸ್ ಒಂದು ಹೊತ್ತಿ ಉರಿದ ಪರಿಣಾಮ ಸ್ಥಳದಲ್ಲೇ 11 ಮಂದಿ ದುರಂತ ಸಾವಿಗೀಡಾಗಿದ್ದಾರೆ.
ನಾಸಿಕ್ನಿಂದ ಪುಣೆಗೆ ತೆರಳುತ್ತಿದ್ದ ಟ್ರಕ್ಗೆ ಯವತ್ಮಾಲ್ನಿಂದ ಮುಂಬೈಗೆ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ 11 ಮಂದಿ ಮೃತಪಟ್ಟಿದ್ದು, 21ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಎಲ್ಲ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.
ಕರುಣಾಜನಕ ಘಟನೆಯಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಸಿಂಧೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿಯವರು ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.
You must be logged in to post a comment Login