Connect with us

    LATEST NEWS

    ಕ್ಯಾರ್ ಚಂಡಮಾರುತ ಹಿನ್ನಲೆ ನಾಳೆ(ಅಕ್ಟೋಬರ್ 26) ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ

    ಕ್ಯಾರ್ ಚಂಡಮಾರುತ ಹಿನ್ನಲೆ ನಾಳೆ(ಅಕ್ಟೋಬರ್ 26) ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ

    ಉಡುಪಿ ಅಕ್ಟೋಬರ್ 25:ಕ್ಯಾರ್ ಚಂಡಮಾರುತದ ಹಿನ್ನಲೆ ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ (26.10.2019) ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜಗದೀಶ್ ಆದೇಶಿಸಿದ್ದಾರೆ.

    ಕ್ಯಾರ್ ಚಂಡಮಾರುತದ ಹಿನ್ನಲೆಯಲ್ಲಿ ಇಂದು ಉಡುಪಿ ಜಿಲ್ಲೆಯಾದ್ಯಂತ ಭಾರಿ ಗಾಳಿ ಮಳೆಯಾಗಿದೆ. ಅಲ್ಲದೆ ನಾಳೆಯೂ ಕೂಡ ಜಿಲ್ಲೆಯಾದ್ಯಂತ ಗಂಟೆಗೆ 40-45ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ನ್ನು ಹವಮಾನ ಇಲಾಖೆ ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ನಾಳೆಯೂ (26.10.2019) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿದೆ. ಅಲ್ಲದೆ ಮೀನುಗಾರರು ಕಡಲಿಗಿಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದು, ಪ್ರವಾಸಿಗರಿಗೂ ಕಡಲ ಕಿನಾರೆಯಲ್ಲಿ ನೀರಿಗಿಳಿಯದಂತೆ‌ ನಿರ್ಬಂಧ ಹೇರಿದೆ.

    Share Information
    Advertisement
    Click to comment

    You must be logged in to post a comment Login

    Leave a Reply