UDUPI
ಮೋಟಾರು ವಾಹನ ಸಾರಿಗೆ ಕಾರ್ಮಿಕ ಕಾಯ್ದೆಯ ಉಲ್ಲಂಘನೆ : ಆರೋಪಿಗೆ ಶಿಕ್ಷೆ
ಉಡುಪಿ, ಆಗಸ್ಟ್ 18: ಹನುಮಾನ್ ಟ್ರಾನ್ಸ್ ಪೋರ್ಟ ಕಂಪೆನಿ ಪ್ರೈವೇಟ್ ಕಂಪನಿ ಲಿಮಿಟೆಡ್ ಜಿಟ್ಪಾಡಿ ಕಂಪೆನಿಯ ವ್ಯವಸ್ಥಾಪಕ ನಿರ್ದೆಶಕರಾದ ವಿಲಾಸ್ ನಾಯಕ್ ರವರು ಮೋಟಾರು ಸಾರಿಗೆ ಉದ್ಯಮೆಯಲ್ಲಿ ನಮೂನೆ 11 ರಲ್ಲಿ ಹೆಚ್ಚುವರಿ ಕೆಲಸದ ಹಾಜರಾತಿ ಪುಸ್ತಕವನ್ನು ನಿರ್ವಹಿಸಿ ಅದರಲ್ಲಿ ಶಶಿಧರ ಬಿ. ಎಚ್ ರವರು ಹೆಚ್ಚುವರಿ ಕೆಲಸವನ್ನು ಮಾಡಿದ ಬಗ್ಗೆ ಪುಸ್ತಕದಲ್ಲಿ ನಮೂದಿಸದೇ ಇದ್ದುದಲ್ಲದೇ ಆನಂದ ಮೂರ್ತಿ ಮತ್ತು ರಾಜೇಶ್ ಯಾದವ್ ಕಾರ್ಮಿಕ ಅಧಿಕಾರಿಗಳು, ಉದ್ದಿಮೆಗೆ ಭೇಟಿ ನೀಡಿದಾಗ ಕಂಟ್ರೋಲ್ ಪುಸ್ತಕವನ್ನು ತಪಾಸಣೆಗೆ ನೀಡದೇ ಮತ್ತು ಕಾಂಪನ್ಸೇಟರಿ ರಜೆಯ ಪುಸ್ತಕವನ್ನು ತಪಾಸಣೆಗೆ ನೀಡದೇ ಮೋಟಾರು ವಾಹನ ಕಾಯ್ದೆಯನ್ನು ಉಲ್ಲಂಘಿಸಿದ ಬಗ್ಗೆ ಅಪರಾಧವನ್ನು ಎಸಗಿದ್ದಾರೆಂದು ದೂರನ್ನು ದಿನಾಂಕ: 2-6-2010 ರಂದು ಮಾನ್ಯ ನ್ಯಾಯಾಲಯದಲ್ಲಿ ದಾಖಲಿಸಿರುತ್ತಾರೆ.
ಈ ಪ್ರಕರಣವು ಮಾನ್ಯ ಉಡುಪಿ ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಪ್ರಕರಣದಲ್ಲಿ ಸಾಕ್ಷ್ಯ ಹಾಗೂ ಪೂರಕ ಸಾಕ್ಷ್ಯವನ್ನು ಹಾಗೂ ವಾದ ವಿವಾದವನ್ನು ಆಲಿಸಿ ಆರೋಪಿ ವಿರುಧ್ದ ಮೇಲಿನ ಪ್ರಕರಣವು ಸಾಬೀತಾಗಿದೆ ಎಂದು ತೀರ್ಮಾನಿಸಿ ನ್ಯಾಯಾಧೀಶರಾದ ಶ್ರೀ ಮಂಜುನಾಥ್ ಎಂ.ಎಸ್ ರವರು ಆರೋಪಿಗೆ ಮೋಟಾರು ವಾಹನ ಸಾರಿಗೆ ಕಾರ್ಮಿಕ ಕಾಯ್ದೆಯ ಕಲಂ.32 ರಡಿ ರೂ 500/- ದಂಡ ಶಿಕ್ಷೆ ವಿಧಿಸಿ ü ದಿನಾಂಕ 27-07-2017 ರಂದು ತೀರ್ಪು ನೀಡಿರುತ್ತಾರೆ.
Facebook Comments
You may like
ಕಲಿತ ಶಾಲೆ ಮುಚ್ಚಬಾರದೆಂದು ಪ್ರಧಾನಿಗೆ ಪತ್ರ ಬರೆದ ಬಾಲಕಿ…!
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಇನ್ಸ್ಪೆಕ್ಟರ್ ಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ಡಬ್ಬಲ್ ಮರ್ಡರ್ ಗೆ ಪೊಲೀಸ್ ನಂಟು : ಡಿಎಆರ್ ನ ಇಬ್ಬರು ಕಾನ್ ಸ್ಟೇಬಲ್ ಗಳ ಬಂಧನ
ಲಂಚ ಸ್ವೀಕಾರ ಆರೋಪ ಸಾಬೀತು : ಗ್ರಾಮ ಕರಣಿಕ ಸೇರಿ ಇಬ್ಬರಿಗೆ ಶಿಕ್ಷೆ
ಅನಾರೋಗ್ಯಪೀಡಿತ ಗೃಹಿಣಿ ಆತ್ಮಹತ್ಯೆ
‘ಮಹಾತ್ಮರ ಸ್ಮರಣೆಯಿಂದ ಉತ್ತಮ ಸಮಾಜ’: ನಳಿನ್ ಪ್ರದೀಪ್ ರಾವ್
You must be logged in to post a comment Login