LATEST NEWS
ಕುಕ್ಕರ್ ಸಿಡಿದು ಬಾಲಕಿ ಗಂಭೀರ

ಕುಕ್ಕರ್ ಸಿಡಿದು ಬಾಲಕಿ ಗಂಭೀರ
ಮಂಗಳೂರು ಜನವರಿ 31: ತರಕಾರಿ ಬೇಯಿಸಲು ಗ್ಯಾಸ್ ಮೇಲಿಟ್ಟಿದ್ದ ಕುಕ್ಕರ್ ಸಿಡಿದು ಬಾಲಿಕಿಯೊಬ್ಬಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರಿನ ನೆಲ್ಯಾಡಿ ಎಂಬಲ್ಲಿ ಈ ಘಟನೆ ನಡೆದಿದ್ದು, ನೆಲ್ಯಾಡಿ ಗ್ರಾಮಪಂಚಾಯತ್ ಸದಸ್ಯೆ ಚೈತ್ರ ಅವರ ಪುತ್ರಿ ಆಜ್ಞಾ.ಕೆ.ಆರ್ (7)ಗಂಭೀರ ಗಾಯಗೊಂಡ ಬಾಲಕಿ. ಕುಕ್ಕರ್ ಮಲ್ಲಿ ತರಕಾರಿ ಬೇಯಿಸಲು ಗ್ಯಾಸ್ ಮೇಲಿಡಲಾಗಿತ್ತು. ಪುಟ್ಟ ಬಾಲಕಿ ಗ್ಯಾಸ್ ಬಂದ್ ಮಾಡುತ್ತಿದ್ದಂತೆ ಕುಕ್ಕರ್ ಸಿಡಿದಿದೆ. ಕುಕ್ಕರ್ ಸಿಡಿತಕ್ಕೆ ಬಾಲಕಿಗೆ ಗಂಭೀರ ಗಾಯಗಳಾಗಿದೆ.

ಕೂಡಲೇ ಬಾಲಕಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ದರದಲ್ಲಿ ಮನೆ ಮನೆಗೆ ಮಾರಾಟ ಮಾಡುವ ಕಳಪೆ ಗುಣಮಟ್ಟದ ಕುಕ್ಕರ್ ಇದಾಗಿದ್ದು, ಈ ಘಟನೆಗೆ ಕಾರಣ ಎಂದು ಹೇಳಲಾಗಿದೆ.