Connect with us

KARNATAKA

ಮಂಗಳೂರು ಕುಕ್ಕರ್ ಬ್ಲಾಸ್ಟ್-ತನಿಖೆ ಮಾಡದೇ ಉಗ್ರ ಅಂತ ಹೇಗೆ ಘೋಷಣೆ ಮಾಡಿದ್ರಿ…!!

ಬೆಂಗಳೂರು ಡಿಸೆಂಬರ್ 15: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟದ ಆರೋಪಿ ಶಾರೀಕ್ ನನ್ನು ಯಾವುದೇ ರೀತಿಯ ತನಿಖೆ ನಡೆಸದೇ ಟೆರರಿಸ್ಟ್ ಎಂದು ಹೇಗೆ ಘೋಷಣೆ ಮಾಡಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.


ಪ್ರೆಸ್‌ ಕ್ಲಬ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆದ ಸ್ಫೋಟ ಮುಂಬೈ ದಾಳಿ ಅಥವಾ ಪುಲ್ವಾಮಾ, ಕಾಶ್ಮೀರದಲ್ಲಿ ಆದಂತೆ ಆಗಲಿಲ್ಲ. ಅದೇನೋ ಕುಕ್ಕರ್ ಟೆರರಿಸ್ಟ್ ಎಂದುಕೊಂಡು ವೋಟರ್ ಐಡಿ ಹಗರಣವನ್ನು ಮುಚ್ಚಿ ಹಾಕಿದರು. ತನಿಖೆ ನಡೆಸದೇ ಇದು ಉಗ್ರ ಕೃತ್ಯ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಅಷ್ಟು ಸ್ಪೀಡ್ ಆಗಿ ಹೇಗೆ ಟ್ವೀಟ್ ಮಾಡಿದ್ರು ಎಂದು ಪ್ರಶ್ನಿಸಿದ್ದಾರೆ.


ಬೆಂಗಳೂರಿನ ವೋಟರ್ ಐಡಿ ಹಗರಣದ ವಿಷಯನ್ನು ಬಿಜೆಪಿ ಡೈವರ್ಟ್ ಮಾಡಿದೆ. ಶಿವಮೊಗ್ಗಕ್ಕೆ, ಮಂಗಳೂರು, ಮಲೆನಾಡು ಭಾಗಕ್ಕೆ ಯಾಕೆ ತನಿಖೆ ಹೋಗಲ್ಲ. ಎಲ್ಲಾ ಬೆಂಗಳೂರಿನಲ್ಲೇ ತನಿಖೆ ಆಗುತ್ತಿದೆ. ಜನರು ದಡ್ಡರಾ? ಜನರ ಭಾವನೆಗಳ ಮೇಲೆ ಸರ್ಕಾರ ಆಟ ಆಡುತ್ತಿದೆ ಎಂದು ಸಿಟ್ಟು ಹೊರ ಹಾಕಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *