Connect with us

LATEST NEWS

ಕೇರಳ ಗಡಿ ಬಂದ್, ವಿಕೇಂಡ್ ಲಾಕ್ ಡೌನ್ ಮಾಡಿದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತ್ಯಧಿಕ ಕೊರೊನಾ ಪ್ರಕರಣ..!!

ಮಂಗಳೂರು ಅಗಸ್ಟ್ 09: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ವಿಕೇಂಡ್ ಲಾಕ್ ಡೌನ್, ಕೇರಳ ಗಡಿ ಭಾಗಗಳನ್ನು ಬಂದ್ ಮಾಡಿದರೂ ಭಾನುವಾರ ಬೆಂಗಳೂರಿಗಿಂತ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅತೀ ಹೆಚ್ಚು ಪ್ರಕರಣ ಕಾಣಿಸಿಕೊಂಡಿದೆ. ಇದರ ಜತೆಯಲ್ಲಿ ಸಾವಿನಲ್ಲೂ ದಕ ಮುಂದಿದೆ. ಪಾಸಿಟಿವಿಟಿ ದರ ಕೂಡ ಏಕ್‌ ದಂ ಏರಿಕೆ ಕಂಡಿದೆ. ಇದೆಲ್ಲ ಲೆಕ್ಕಾಚಾರದಲ್ಲಿ ಸದ್ಯಕ್ಕೆ ದಕ ಜಿಲ್ಲೆಯಲ್ಲಿ ಕೋವಿಡ್‌ ಅಬ್ಬರ ನಿಲ್ಲುವ ಲಕ್ಷಣ ಇಲ್ಲ.

ರಾಜ್ಯದಲ್ಲಿ 1598 ಕೋವಿಡ್‌ ಪಾಸಿಟಿವ್‌ನಲ್ಲಿ ಬೆಂಗಳೂರು ನಗರದಲ್ಲಿ 348 ಪಾಸಿಟಿವ್‌ ಹಾಗೂ ಒಬ್ಬರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 438 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ, ಮಂಗಳೂರು, ಪುತ್ತೂರಿನ ತಲಾ ಒಬ್ಬರು ಹಾಗೂ ಹೊರ ಜಿಲ್ಲೆಯ ಮೂವರು ಸಾವನ್ನಪ್ಪಿದ್ದಾರೆ.

ಜಿಲ್ಲೆಯಲ್ಲಿ 311 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 1,466 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಎರಡು ದಿನಗಳಲ್ಲಿ ಮೂರರ ಆಸುಪಾಸಿನಲ್ಲಿ ಪಾಸಿಟಿವಿಟಿ ದರ ಭಾನುವಾರ ಶೇ.4.57 ಇದೆ. ಮಂಗಳೂರು ಎರಡು ಕಡೆಯಲ್ಲಿ ಕಂಟೈನ್‌ಮೆಂಟ್‌ ವಲಯವನ್ನಾಗಿ ಘೋಷಣೆ ಮಾಡಲಾಗಿದೆ.

ನೆರೆ ರಾಜ್ಯಗಳಿಗೆ ಜನರ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕೇವಲ ಕೊರೊನಾ ನೆಗೆಟಿವ್ ಸರ್ಟಿಫಿಕೇಟ್ ಇದ್ದರೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೆ ಜಿಲ್ಲೆಯಲ್ಲಿ ವಿಕೇಂಡ್ ಲಾಕ್ ಡೌನ್ ಕೂಡ ಮಾಡಲಾಗಿದೆ. ಆದರೂ ಕೊರೊನಾ ಅಬ್ಬರ ಮಾತ್ರ ಇಳಿಕೆಯಾಗಿಲ್ಲ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *